ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm