ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm