ಬ್ರೇಕಿಂಗ್ ನ್ಯೂಸ್
25-11-21 10:17 am HK news Desk ದೇಶ - ವಿದೇಶ
ಜೈಪುರ, ನ 25: ರಾಜಸ್ಥಾನ ಸಚಿವ ಸಂಪುಟದಲ್ಲಿ ಇತ್ತೀಚೆಗಷ್ಟೇ ಸ್ಥಾನ ಪಡೆದ ರಾಜೇಂದ್ರ ಸಿಂಗ್ ಗೌಡ ಅವರು ನೀಡಿರುವ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್ ಗೌಡ, ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಅವರ ಕೆನ್ನೆಯಷ್ಟು ಸೊಗಸಾದ ರಸ್ತೆಗಳನ್ನು ಮಾಡಿಸುತ್ತೇನೆಂದು ಭರವಸೆ ನೀಡಿದ್ದಾರೆ.
ರಾಜಸ್ಥಾನದ ಜಂಜುನು ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಸಚಿವರು ಈ ಭರವಸೆಯನ್ನು ನೀಡಿದ್ದಾರೆ. ಗೌಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯಲ್ಲಿ ಟಿಕೆಟ್ ಪಡೆದು ಜಯ ಸಾಧಿಸಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.

ಇನ್ನು ರಾಜಕಾರಣಿಗಳ ರಸ್ತೆಗಳನ್ನು ಸೆಲೆಬ್ರಿಟಿಗಳ ಕೆನ್ನಗೆ ಹೋಲಿಸಿ ಮಾತನಾಡುವುದು ಇದೇ ಮೊದಲೇನಲ್ಲ. 2015ರಲ್ಲಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಮಾಮಾಲಿನಿ ಕೆನ್ನೆಯಂತ ನಯವಾದ ರಸ್ತೆಗಳನ್ನು ಮಾಡಿಸುವ ಭರವಸೆ ನೀಡಿದ್ದರು.
ಮಧ್ಯಪ್ರದೇಶದ ಕಾನೂನು ಸಚಿವ ಪಿ.ಸಿ. ಶರ್ಮಾ ಕೂಡ 2019ರಲ್ಲಿ ಇದೇ ರೀತಿಯ ಹೇಳಿಕೆ ನೀಡಿದ್ದರು. ರಾಜ್ಯದ ಗುಂಡಿಯುಕ್ತ ರಸ್ತೆಗಳು ಕನಸಿನ ಹುಡುಗಿಯ ಕೆನ್ನೆಯ ರೀತಿ ಬದಲಾಗಲಿದೆ ಎಂದು ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶದ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಸಚಿವ ರಾಜಾರಾಮ್ ಪಾಂಡೆ ಮಾತನಾಡಿ, ಪ್ರತಾಪಗಢ ಜಿಲ್ಲೆಯಲ್ಲಿರುವ ರಸ್ತೆಗಳನ್ನು ಹೇಮಾಮಾಲಿನಿ ಮತ್ತು ಮಾಧುರಿ ದೀಕ್ಷಿತ್ ಗಲ್ಲದಂತೆ ಸೊಗಸಾಗಿ ಮಾಡಲಾಗುವುದು ಎಂದಿದ್ದರು. ಆದರೆ, ರಾಜಕಾರಣಿಗಳು ನೀಡಿದ ಭರವಸೆ ಮಾತ್ರ ಇಂದಿಗೂ ಭರವಸೆ ಆಗಿಯೇ ಉಳಿದಿವೆ.
New Rajasthan minister Rajendra Gudha visited his constituency for the first time after becoming a Cabinet minister in the latest expansion of Ashok Gehlot Cabinet. Confronted by the public over the issue of bad roads, the new minister promised roads as smooth as the cheeks of Bollywood actor Katrina Kaif. People listening to the minister clap and burst into laughter. Reports said the minister was addressing officers and first referred to Hema Malini, BJP MP.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm