ಬ್ರೇಕಿಂಗ್ ನ್ಯೂಸ್
25-11-21 10:17 am HK news Desk ದೇಶ - ವಿದೇಶ
ಜೈಪುರ, ನ 25: ರಾಜಸ್ಥಾನ ಸಚಿವ ಸಂಪುಟದಲ್ಲಿ ಇತ್ತೀಚೆಗಷ್ಟೇ ಸ್ಥಾನ ಪಡೆದ ರಾಜೇಂದ್ರ ಸಿಂಗ್ ಗೌಡ ಅವರು ನೀಡಿರುವ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್ ಗೌಡ, ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಅವರ ಕೆನ್ನೆಯಷ್ಟು ಸೊಗಸಾದ ರಸ್ತೆಗಳನ್ನು ಮಾಡಿಸುತ್ತೇನೆಂದು ಭರವಸೆ ನೀಡಿದ್ದಾರೆ.
ರಾಜಸ್ಥಾನದ ಜಂಜುನು ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಸಚಿವರು ಈ ಭರವಸೆಯನ್ನು ನೀಡಿದ್ದಾರೆ. ಗೌಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯಲ್ಲಿ ಟಿಕೆಟ್ ಪಡೆದು ಜಯ ಸಾಧಿಸಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.

ಇನ್ನು ರಾಜಕಾರಣಿಗಳ ರಸ್ತೆಗಳನ್ನು ಸೆಲೆಬ್ರಿಟಿಗಳ ಕೆನ್ನಗೆ ಹೋಲಿಸಿ ಮಾತನಾಡುವುದು ಇದೇ ಮೊದಲೇನಲ್ಲ. 2015ರಲ್ಲಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಮಾಮಾಲಿನಿ ಕೆನ್ನೆಯಂತ ನಯವಾದ ರಸ್ತೆಗಳನ್ನು ಮಾಡಿಸುವ ಭರವಸೆ ನೀಡಿದ್ದರು.
ಮಧ್ಯಪ್ರದೇಶದ ಕಾನೂನು ಸಚಿವ ಪಿ.ಸಿ. ಶರ್ಮಾ ಕೂಡ 2019ರಲ್ಲಿ ಇದೇ ರೀತಿಯ ಹೇಳಿಕೆ ನೀಡಿದ್ದರು. ರಾಜ್ಯದ ಗುಂಡಿಯುಕ್ತ ರಸ್ತೆಗಳು ಕನಸಿನ ಹುಡುಗಿಯ ಕೆನ್ನೆಯ ರೀತಿ ಬದಲಾಗಲಿದೆ ಎಂದು ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶದ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಸಚಿವ ರಾಜಾರಾಮ್ ಪಾಂಡೆ ಮಾತನಾಡಿ, ಪ್ರತಾಪಗಢ ಜಿಲ್ಲೆಯಲ್ಲಿರುವ ರಸ್ತೆಗಳನ್ನು ಹೇಮಾಮಾಲಿನಿ ಮತ್ತು ಮಾಧುರಿ ದೀಕ್ಷಿತ್ ಗಲ್ಲದಂತೆ ಸೊಗಸಾಗಿ ಮಾಡಲಾಗುವುದು ಎಂದಿದ್ದರು. ಆದರೆ, ರಾಜಕಾರಣಿಗಳು ನೀಡಿದ ಭರವಸೆ ಮಾತ್ರ ಇಂದಿಗೂ ಭರವಸೆ ಆಗಿಯೇ ಉಳಿದಿವೆ.
New Rajasthan minister Rajendra Gudha visited his constituency for the first time after becoming a Cabinet minister in the latest expansion of Ashok Gehlot Cabinet. Confronted by the public over the issue of bad roads, the new minister promised roads as smooth as the cheeks of Bollywood actor Katrina Kaif. People listening to the minister clap and burst into laughter. Reports said the minister was addressing officers and first referred to Hema Malini, BJP MP.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm