ಬ್ರೇಕಿಂಗ್ ನ್ಯೂಸ್
25-11-21 10:17 am HK news Desk ದೇಶ - ವಿದೇಶ
ಜೈಪುರ, ನ 25: ರಾಜಸ್ಥಾನ ಸಚಿವ ಸಂಪುಟದಲ್ಲಿ ಇತ್ತೀಚೆಗಷ್ಟೇ ಸ್ಥಾನ ಪಡೆದ ರಾಜೇಂದ್ರ ಸಿಂಗ್ ಗೌಡ ಅವರು ನೀಡಿರುವ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್ ಗೌಡ, ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಅವರ ಕೆನ್ನೆಯಷ್ಟು ಸೊಗಸಾದ ರಸ್ತೆಗಳನ್ನು ಮಾಡಿಸುತ್ತೇನೆಂದು ಭರವಸೆ ನೀಡಿದ್ದಾರೆ.
ರಾಜಸ್ಥಾನದ ಜಂಜುನು ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಸಚಿವರು ಈ ಭರವಸೆಯನ್ನು ನೀಡಿದ್ದಾರೆ. ಗೌಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯಲ್ಲಿ ಟಿಕೆಟ್ ಪಡೆದು ಜಯ ಸಾಧಿಸಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.

ಇನ್ನು ರಾಜಕಾರಣಿಗಳ ರಸ್ತೆಗಳನ್ನು ಸೆಲೆಬ್ರಿಟಿಗಳ ಕೆನ್ನಗೆ ಹೋಲಿಸಿ ಮಾತನಾಡುವುದು ಇದೇ ಮೊದಲೇನಲ್ಲ. 2015ರಲ್ಲಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಮಾಮಾಲಿನಿ ಕೆನ್ನೆಯಂತ ನಯವಾದ ರಸ್ತೆಗಳನ್ನು ಮಾಡಿಸುವ ಭರವಸೆ ನೀಡಿದ್ದರು.
ಮಧ್ಯಪ್ರದೇಶದ ಕಾನೂನು ಸಚಿವ ಪಿ.ಸಿ. ಶರ್ಮಾ ಕೂಡ 2019ರಲ್ಲಿ ಇದೇ ರೀತಿಯ ಹೇಳಿಕೆ ನೀಡಿದ್ದರು. ರಾಜ್ಯದ ಗುಂಡಿಯುಕ್ತ ರಸ್ತೆಗಳು ಕನಸಿನ ಹುಡುಗಿಯ ಕೆನ್ನೆಯ ರೀತಿ ಬದಲಾಗಲಿದೆ ಎಂದು ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶದ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಸಚಿವ ರಾಜಾರಾಮ್ ಪಾಂಡೆ ಮಾತನಾಡಿ, ಪ್ರತಾಪಗಢ ಜಿಲ್ಲೆಯಲ್ಲಿರುವ ರಸ್ತೆಗಳನ್ನು ಹೇಮಾಮಾಲಿನಿ ಮತ್ತು ಮಾಧುರಿ ದೀಕ್ಷಿತ್ ಗಲ್ಲದಂತೆ ಸೊಗಸಾಗಿ ಮಾಡಲಾಗುವುದು ಎಂದಿದ್ದರು. ಆದರೆ, ರಾಜಕಾರಣಿಗಳು ನೀಡಿದ ಭರವಸೆ ಮಾತ್ರ ಇಂದಿಗೂ ಭರವಸೆ ಆಗಿಯೇ ಉಳಿದಿವೆ.
New Rajasthan minister Rajendra Gudha visited his constituency for the first time after becoming a Cabinet minister in the latest expansion of Ashok Gehlot Cabinet. Confronted by the public over the issue of bad roads, the new minister promised roads as smooth as the cheeks of Bollywood actor Katrina Kaif. People listening to the minister clap and burst into laughter. Reports said the minister was addressing officers and first referred to Hema Malini, BJP MP.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm