ಬ್ರೇಕಿಂಗ್ ನ್ಯೂಸ್
26-11-21 01:20 pm HK news Desk ದೇಶ - ವಿದೇಶ
ಚೆನ್ನೈ, ನ.26: ತಮಿಳುನಾಡು ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, 20 ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ, ತೆಂಕಾಸಿ, ತಿರುನಲ್ವೇಲಿ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯ ಬಳಿಕ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ಮಳೆಯ ಹೊಡೆತ ಕಡಿಮೆಯಾಗಿತ್ತು. ಆದರೆ, ಹವಾಮಾನ ಇಲಾಖೆ ಮತ್ತೊಂದು ಚಂಡಮಾರುತ ಎದ್ದಿರುವ ಬಗ್ಗೆ ಮಾಹಿತಿ ನೀಡಿದ್ದು, ನ.26ರ ನಂತರ ನಾಲ್ಕು ದಿನಗಳ ಮಳೆಯಾಗುವ ಎಚ್ಚರಿಕೆ ನೀಡಿದೆ. ತೂತುಕುಡಿ, ಕುದ್ದಲೂರು, ವಿಲ್ಲುಪುರಂ, ಚೆಂಗಲ್ ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಲ್ಲೂರು, ತೇನಿ, ಮದುರೈ, ಪುದುಕೋಟೈ, ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.


ಈ ವಾರದ ಮೂರು ದಿನಗಳಲ್ಲಿ ಶಾಲೆ ಮತ್ತೆ ಪುನರ್ ಆರಂಭಗೊಂಡಿತ್ತು. ಚೆನ್ನೈನಲ್ಲಿ ಒಂದು ವಾರ ಪೂರ್ತಿ ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆದರೆ, ಗುರುವಾರ ರಾತ್ರಿ ಮತ್ತೆ ಮಳೆಯಾಗಿದ್ದು, ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿ ಚಂಡಮಾರುತ ಎದ್ದಿದ್ದು, ತಮಿಳುನಾಡು ಮತ್ತು ಆಂಧ್ರ ಕರಾವಳಿಯಲ್ಲಿ ಮತ್ತೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. 40ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗಿಳಿಯದಂತೆ ಸೂಚನೆ ನೀಡಲಾಗಿದೆ.
Schools will remain shut in over 20 districts of Tamil Nadu even as the Indian Meteorological Department (IMD) predicted heavy to very heavy rain in parts of the state on Friday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm