ಬ್ರೇಕಿಂಗ್ ನ್ಯೂಸ್
26-11-21 01:20 pm HK news Desk ದೇಶ - ವಿದೇಶ
ಚೆನ್ನೈ, ನ.26: ತಮಿಳುನಾಡು ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, 20 ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ, ತೆಂಕಾಸಿ, ತಿರುನಲ್ವೇಲಿ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯ ಬಳಿಕ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ಮಳೆಯ ಹೊಡೆತ ಕಡಿಮೆಯಾಗಿತ್ತು. ಆದರೆ, ಹವಾಮಾನ ಇಲಾಖೆ ಮತ್ತೊಂದು ಚಂಡಮಾರುತ ಎದ್ದಿರುವ ಬಗ್ಗೆ ಮಾಹಿತಿ ನೀಡಿದ್ದು, ನ.26ರ ನಂತರ ನಾಲ್ಕು ದಿನಗಳ ಮಳೆಯಾಗುವ ಎಚ್ಚರಿಕೆ ನೀಡಿದೆ. ತೂತುಕುಡಿ, ಕುದ್ದಲೂರು, ವಿಲ್ಲುಪುರಂ, ಚೆಂಗಲ್ ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಲ್ಲೂರು, ತೇನಿ, ಮದುರೈ, ಪುದುಕೋಟೈ, ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.


ಈ ವಾರದ ಮೂರು ದಿನಗಳಲ್ಲಿ ಶಾಲೆ ಮತ್ತೆ ಪುನರ್ ಆರಂಭಗೊಂಡಿತ್ತು. ಚೆನ್ನೈನಲ್ಲಿ ಒಂದು ವಾರ ಪೂರ್ತಿ ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆದರೆ, ಗುರುವಾರ ರಾತ್ರಿ ಮತ್ತೆ ಮಳೆಯಾಗಿದ್ದು, ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿ ಚಂಡಮಾರುತ ಎದ್ದಿದ್ದು, ತಮಿಳುನಾಡು ಮತ್ತು ಆಂಧ್ರ ಕರಾವಳಿಯಲ್ಲಿ ಮತ್ತೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. 40ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗಿಳಿಯದಂತೆ ಸೂಚನೆ ನೀಡಲಾಗಿದೆ.
Schools will remain shut in over 20 districts of Tamil Nadu even as the Indian Meteorological Department (IMD) predicted heavy to very heavy rain in parts of the state on Friday.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm