ಬ್ರೇಕಿಂಗ್ ನ್ಯೂಸ್
26-11-21 01:20 pm HK news Desk ದೇಶ - ವಿದೇಶ
ಚೆನ್ನೈ, ನ.26: ತಮಿಳುನಾಡು ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, 20 ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ, ತೆಂಕಾಸಿ, ತಿರುನಲ್ವೇಲಿ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯ ಬಳಿಕ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ಮಳೆಯ ಹೊಡೆತ ಕಡಿಮೆಯಾಗಿತ್ತು. ಆದರೆ, ಹವಾಮಾನ ಇಲಾಖೆ ಮತ್ತೊಂದು ಚಂಡಮಾರುತ ಎದ್ದಿರುವ ಬಗ್ಗೆ ಮಾಹಿತಿ ನೀಡಿದ್ದು, ನ.26ರ ನಂತರ ನಾಲ್ಕು ದಿನಗಳ ಮಳೆಯಾಗುವ ಎಚ್ಚರಿಕೆ ನೀಡಿದೆ. ತೂತುಕುಡಿ, ಕುದ್ದಲೂರು, ವಿಲ್ಲುಪುರಂ, ಚೆಂಗಲ್ ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಲ್ಲೂರು, ತೇನಿ, ಮದುರೈ, ಪುದುಕೋಟೈ, ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಈ ವಾರದ ಮೂರು ದಿನಗಳಲ್ಲಿ ಶಾಲೆ ಮತ್ತೆ ಪುನರ್ ಆರಂಭಗೊಂಡಿತ್ತು. ಚೆನ್ನೈನಲ್ಲಿ ಒಂದು ವಾರ ಪೂರ್ತಿ ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆದರೆ, ಗುರುವಾರ ರಾತ್ರಿ ಮತ್ತೆ ಮಳೆಯಾಗಿದ್ದು, ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿ ಚಂಡಮಾರುತ ಎದ್ದಿದ್ದು, ತಮಿಳುನಾಡು ಮತ್ತು ಆಂಧ್ರ ಕರಾವಳಿಯಲ್ಲಿ ಮತ್ತೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. 40ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗಿಳಿಯದಂತೆ ಸೂಚನೆ ನೀಡಲಾಗಿದೆ.
Schools will remain shut in over 20 districts of Tamil Nadu even as the Indian Meteorological Department (IMD) predicted heavy to very heavy rain in parts of the state on Friday.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am