ಬ್ರೇಕಿಂಗ್ ನ್ಯೂಸ್
29-11-21 02:12 pm HK Desk news ದೇಶ - ವಿದೇಶ
ನವದೆಹಲಿ, ನ.29: ವಿಪಕ್ಷ ಕಾಂಗ್ರೆಸ್ ಮತ್ತಿತರ ಪಕ್ಷಗಳ ಸಂಸದರ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ವಿವಾದಿತ ಕೃಷಿ ಮಸೂದೆಗಳನ್ನು ಬಿಜೆಪಿ ಸರಕಾರ ಅಧಿಕೃತವಾಗಿ ಹಿಂಪಡೆದುಕೊಂಡಿದೆ. ಕಾಂಗ್ರೆಸ್ ನಾಯಕರು ಕೃಷಿ ಮಸೂದೆ ಹಿಂತೆಗೆತದ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.


ಆದರೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಮಸೂದೆಗಳನ್ನು ಹಿಂಪಡೆಯುವ ಬಗ್ಗೆ ಸದನಕ್ಕೆ ಓದಿ ಹೇಳಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್ ನಾಯಕರು ಸದನದ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಕೇಳಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ, ಧಿಕ್ಕಾರ, ಬೊಬ್ಬೆ ಹಾಕುತ್ತಲೇ ಸ್ಪೀಕರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದರ ನಡುವೆಯೇ, ಬಿಜೆಪಿ ಸಂಸದರು ಧ್ವನಿಮತದ ಮೂಲಕ ಮಸೂದೆಯನ್ನು ಹಿಂಪಡೆಯುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಸದನದ ಒಪ್ಪಿಗೆ ಪಡೆದಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು, ಕಾಂಗ್ರೆಸ್ ನಾಯಕರು ಶಾಂತಿಯಿಂದ ವರ್ತಿಸಿದರೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆಗಳ ವಿರುದ್ಧ ಒಂದು ವರ್ಷದ ಪರ್ಯಂತ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು.
ನವೆಂಬರ್ ಆರಂಭದಲ್ಲಿ ಪ್ರಧಾನಿ ಮೋದಿ ದಿಢೀರ್ ಆಗಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದರು. ಇದೇ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತವಾಗಿ ಮಸೂದೆ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ಚಳಿಗಾಲ ಅಧಿವೇಶನದ ಮೊದಲ ದಿನವೇ ಕೃಷಿ ಮಸೂದೆಗಳನ್ನು ಹಿಂಪಡೆದಿದ್ದು, ವಿಪಕ್ಷಗಳು ಮತ್ತು ಕೃಷಿಕರ ಪರ ಸಂಘಟನೆಗಳ ವಿರೋಧಕ್ಕೆ ಮಣೆ ಹಾಕಲಾಗಿದೆ.
The 25-day Winter Session of parliament, during which over 30 bills are expected to be passed, began today. A crucial bill to cancel farm laws was passed in Lok Sabha in the fastest repeal in recent years amid protests by the opposition.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm