ಬ್ರೇಕಿಂಗ್ ನ್ಯೂಸ್
07-12-21 09:58 pm HK Desk news ದೇಶ - ವಿದೇಶ
ಲಖ್ನೋ, ಡಿ.7 : ಖುರಾನ್ ಬಗ್ಗೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ದಿಢೀರ್ ಬೆಳವಣಿಗೆಯಲ್ಲಿ ಇಸ್ಲಾಮನ್ನೇ ತೊರೆದು ಹಿಂದು ಧರ್ಮವನ್ನು ಸೇರಿದ್ದಾರೆ. ವಾಸಿಂ ರಿಜ್ವಿ ನಡೆ ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.
ಘಾಜಿಯಾಬಾದ್ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರ ನೇತೃತ್ವದಲ್ಲಿ ರಿಜ್ವಿ ಅವರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಹಿಂದುವಾಗಿ ಮತಾಂತರಗೊಂಡ ನಂತರ ರಿಜ್ವಿ ಅವರ ಹೆಸರನ್ನು ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಎಂದು ಮರು ನಾಮಕರಣ ಮಾಡಲಾಗಿದೆ.
ಮುಸ್ಲಿಂ ವ್ಯಕ್ತಿಯೊಬ್ಬರು ಹೀಗೆ ದಿಢೀರ್ ಆಗಿ ಹಿಂದುವಾಗಲು ಕಾರಣವಾಗಿದ್ದು ಖುರಾನ್ ಕೃತಿಯಲ್ಲಿರುವ ಕೆಲವು ಅಂಶಗಳ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು. ಖುರಾನಿನ ಕೆಲವು ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ಪುಸ್ತಕದಿಂದ ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್, ಆ ಬಗ್ಗೆ ನಾವು ನಿರ್ಧಾರಕ್ಕೆ ಬರಲು ಸಾಧ್ಯವಾಗಲ್ಲ ಎಂದು ಅರ್ಜಿಯನ್ನು ವಜಾ ಮಾಡಿತ್ತು.
ಇದಾದ ಮೇಲೆ ರಿಜ್ವಿ ಅವರಿಗೆ ಮುಸ್ಲಿಂ ಸಮುದಾಯದ ಕೆಲವು ಮೂಲಭೂತವಾದಿಗಳು ಬಹಿರಂಗ ಬೆದರಿಕೆ ಹಾಕಿದ್ದರು. ಇವರನ್ನು ಹತ್ಯೆ ಮಾಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಮೊತ್ತವನ್ನು 10 ಲಕ್ಷ, 20 ಲಕ್ಷಕ್ಕೆ ಏರಿಸಿ ಕೊನೆಗೆ ಒಂದು ಕೋಟಿಗೆ ಏರಿಸಲಾಗಿತ್ತು. ಈ ರೀತಿಯ ಬೆಳವಣಿಗೆಯಿಂದ ನೊಂದ ರಿಜ್ವಿ, ಇಸ್ಲಾಂ ಧರ್ಮವೇ ಬೇಡ ಎಂದು ಹಿಂದು ಧರ್ಮವನ್ನು ಸೇರಿದ್ದಾರೆ.

ಉತ್ತರ ಪ್ರದೇಶದ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ವಕ್ಫ್ ಬೋರ್ಡ್ನ ಅಧ್ಯಕ್ಷರಾಗಿದ್ದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರವಾಗಿರುವುದು ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ. ಈ ನಡುವೆ ರಿಜ್ವಿಯವರು ಸನಾತನ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.
The former chairman of Uttar Pradesh Shia Waqf Board, Wasim Rizvi, converted to Hinduism (also known as Sanatan Dharma) on Monday. He offered milk on the Shiva Linga installed at Dasna Devi temple as part of the ritual.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm