ಬ್ರೇಕಿಂಗ್ ನ್ಯೂಸ್
13-12-21 12:08 pm HK Desk news ದೇಶ - ವಿದೇಶ
ನವದೆಹಲಿ. ಡಿ.13 : ಸುದೀರ್ಘ 21 ವರ್ಷಗಳ ಬಳಿಕ ಭಾರತಕ್ಕೆ ವಿಶ್ವ ಸುಂದರಿ ಪಟ್ಟ ಒಲಿದಿದೆ. ಚಂಡೀಗಢ ಮೂಲದ 21ರ ಹರೆಯದ ಸುಂದರಿ ಹರ್ನಾಜ್ ಕೌರ್ ಸಂಧು 70ನೇ ಮಿಸ್ ಯುನಿವರ್ಸ್ ಕಿರೀಟ ಒಲಿಸಿಕೊಂಡಿದ್ದಾರೆ.
ಈ ಹಿಂದೆ ಎರಡು ಬಾರಿ ಮಾತ್ರ ಭಾರತಕ್ಕೆ ಮಿಸ್ ಯುನಿವರ್ಸ್ ಸೌಂದರ್ಯ ಪ್ರಶಸ್ತಿ ಲಭಿಸಿತ್ತು. 1994ರಲ್ಲಿ ಸುಶ್ಮಿತಾ ಸೇನ್, ಆಬಳಿಕ 2000ನೇ ಇಸವಿಯಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.

ಇಸ್ರೇಲ್ ದೇಶದ ಇಲಾಟ್ ನಲ್ಲಿ 70ನೇ ಮಿಸ್ ಯುನಿವರ್ಸ್ ಸೌಂದರ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾರತ ಪರವಾಗಿ ಸ್ಪರ್ಧಿಸಿದ್ದ ರೂಪದರ್ಶಿ ಹರ್ನಾಜ್ ಕೌರ್ ಸಿಂಧು ಅವರನ್ನು ಭುವನ ಸುಂದರಿಯಾಗಿ ಘೋಷಿಸಲಾಯ್ತು. ಮೊದಲ ರನ್ನರ್ ಅಪ್ ಆಗಿ ಪರಾಗ್ವೆ ದೇಶದ 22 ವರ್ಷದ ನಾದಿಯಾ ಫೆರಾರ ಮತ್ತು ಎರಡನೇ ರನ್ನರ್ ಅಪ್ ಪ್ರಶಸ್ತಿಗೆ ದಕ್ಷಿಣ ಆಫ್ರಿಕಾದ 24 ವರ್ಷದ ಲಲೇಲಾ ಸ್ವಾನ್ ಅವರನ್ನು ಆಯ್ಕೆ ಮಾಡಲಾಯ್ತು.

ಪಂಜಾಬ್ ರಾಜ್ಯದ ಚಂಡೀಗಢ ಮೂಲದ ಮಾಡೆಲ್ ಆಗಿರುವ ಹರ್ನಾಜ್ ಕೌರ್ ಅವರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಮಿಸ್ ಇಂಡಿಯಾ ಆಗಿ ಘೋಷಣೆ ಮಾಡಲಾಗಿತ್ತು. ಪಂಜಾಬ್ ನಟಿಯೂ ಆಗಿರುವ ಹರ್ನಾಜ್ ಕೌರ್, ಸಾರ್ವಜನಿಕ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದಾರೆ.
The new Miss Universe is...India!!!! #MISSUNIVERSE pic.twitter.com/DTiOKzTHl4
— Miss Universe (@MissUniverse) December 13, 2021
At the Miss Universe 2021 pageant in Israel, India’s tri colour is flying high as actress and model Harnaaz Kaur Sandhu was declared the winner of the competition. Apart from Harnaaz, South Africa’s Lalela Mswane was declared the second runner-up and Paraguay’s Nadia Ferreira was the first runner up. It was the 70th edition of the prestigious annual event.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm