ಬ್ರೇಕಿಂಗ್ ನ್ಯೂಸ್
 
            
                        14-12-21 12:11 pm HK Desk news ದೇಶ - ವಿದೇಶ
 
            ಕಾಸರಗೋಡು, ಡಿ.14 : ಕಾಸರಗೋಡು ಬ್ಲಾಕ್ ಪಂಚಾಯತ್ ಬಿಜೆಪಿ ಸದಸ್ಯೆಯೊಬ್ಬರಿಗೆ ಉಗ್ರವಾದ ಮತ್ತು ಲವ್ ಜಿಹಾದ್ ಬೆಂಬಲಿಸಿ ಬರೆದ ಕರಪತ್ರಗಳನ್ನು ಪೋಸ್ಟ್ ನಲ್ಲಿ ಕಳಿಸಲಾಗಿದ್ದು, ಆತಂಕ ವ್ಯಕ್ತವಾಗಿದೆ.
ಬದಿಯಡ್ಕ ಸಮೀಪದ ಪೆರಡಾಲ ಡಿವಿಶನ್ ಪ್ರತಿನಿಧಿಸುವ ಬಿಜೆಪಿಯ ಕೆ.ಎಂ.ಅಶ್ವಿನಿ ಅವರಿಗೆ ಈ ರೀತಿಯ ವಿಕೃತ ಪೋಸ್ಟ್ ಮಾಡಲಾಗಿದ್ದು, ಆಕೆಯ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಕರಪತ್ರಗಳನ್ನು ಪೋಸ್ಟ್ ಮೂಲಕ ಅಶ್ವಿನಿ ಅವರ ವಿಳಾಸಕ್ಕೆ ಕಳಿಸಲಾಗಿತ್ತು. ಅಶ್ವಿನಿ ಕರಪತ್ರಗಳನ್ನು ಬದಿಯಡ್ಕ ಠಾಣೆಗೆ ಒಪ್ಪಿಸಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಶ್ವಿನಿ ಅವರು ನೀರ್ಚಾಲು ಸಮೀಪದ ಓಣಿಯಡ್ಕ ಎಂಬಲ್ಲಿ ವಾಸವಿದ್ದಾರೆ. ಈಕೆಯ ವಿಳಾಸಕ್ಕೆ ಪೋಸ್ಟ್ ನಲ್ಲಿ ಕರಪತ್ರಗಳನ್ನು ಕಳುಹಿಸಲಾಗಿತ್ತು. ಕಳುಹಿಸಿದವರ ವಿಳಾಸ ಕುರಾನ್ ಎಜುಕೇಶನ್, ಪೋಸ್ಟ್ ಬಾಕ್ಸ್ ನಂಬರ್ 58, ಮಂಜೇರಿ, ಮಲಪ್ಪುರಂ ಎಂದು ಬರೆಯಲಾಗಿತ್ತು.
ಒಂದು ಕರಪತ್ರದಲ್ಲಿ ಭೂಮಿ ತಿರುಗುವುದನ್ನು ಹೇಗೆ ನಿಲ್ಲಿಸುವುದು ಎಂಬ ಬಗ್ಗೆ ಉಪದೇಶದ ವಾಕ್ಯಗಳಿವೆ. ತಮಿಳು, ಇಂಗ್ಲಿಷ್, ಅರೇಬಿಕ್ ಭಾಷೆಯಲ್ಲಿ ಉಗ್ರವಾದ ಮತ್ತು ಲವ್ ಜಿಹಾದ್ ಪರವಾಗಿ ಬರೆಯಲಾಗಿದೆ. ಕರಪತ್ರದ ಕೆಳಗಡೆ ಮುಹಿಯುದ್ದೀನ್ ಮೊಹಮ್ಮದ್ ಇರುಂಬುಝಿ ಎಂಬ ಹೆಸರನ್ನೂ ಬರೆಯಲಾಗಿದೆ. ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಮಂದಿಗೆ ನನ್ನ ವಿಳಾಸ ಸಿಕ್ಕಿದ್ದು ಹೇಗೆ ಎಂದು ಅಶ್ವಿನಿ ಅಚ್ಚರಿಗೆ ಒಳಗಾಗಿದ್ದಾರೆ. ಇದರ ಹಿಂದೆ ಉಗ್ರವಾದ ಬೆಂಬಲಿಸುವ ಸ್ಥಳೀಯರ ಕೈವಾಡ ಇರುವ ಶಂಕೆಯನ್ನು ಅಶ್ವಿನಿ ವ್ಯಕ್ತಪಡಿಸಿದ್ದಾರೆ.
 
            
            
            A member of Kasargod block panchayat has received three pamphlets by post, the contents of which support t terrorism and Love Jihad. K M Ashwini from the BJP who represents Peradala division in the block panchayat received these pamphlets. She has since handed them over to the Badiadka police station. The police have registered a case and begun an investigation.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm