ಬ್ರೇಕಿಂಗ್ ನ್ಯೂಸ್
 
            
                        14-12-21 12:34 pm HK Desk news ದೇಶ - ವಿದೇಶ
 
            ತಿರುವನಂತಪುರಂ, ಡಿ.14 : ಕೋವಿಡ್ ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಮೋದಿ ಚಿತ್ರ ಹಾಕಿರುವುದನ್ನು ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿಗೆ ಕೇರಳ ಹೈಕೋರ್ಟ್ ತಪರಾಕಿ ಹಾಕಿದೆ. ಮೋದಿ ನಮ್ಮ ದೇಶದ ಪ್ರಧಾನಿ. ಅಮೆರಿಕದ ಪ್ರಧಾನಿಯಲ್ಲ. ದೇಶದ ಪ್ರಧಾನಿಯ ಫೋಟೊ ಹಾಕಿದರೆ ನಿಮಗೇನು ತೊಂದರೆ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸರ್ಟಿಫಿಕೇಟಿನಲ್ಲಿ ಮೋದಿ ಫೋಟೋ ಹಾಕಿರುವುದು ನನ್ನ ಮೂಲಭೂತ ಹಕ್ಕಿಗೆ ಉಲ್ಲಂಘನೆಯಾಗಿದೆ ಎಂದು ವ್ಯಕ್ತಿಯೊಬ್ಬರು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ವಿ.ಕುಂಞಕೃಷ್ಣನ್, ಮೋದಿ ನಮ್ಮ ದೇಶದ ಪ್ರಧಾನಿ. ಅವರು ಜನರಿಂದ ಆಯ್ಕೆಯಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಯಾವುದೇ ಹಿಂಬಾಗಿಲ ಮೂಲಕ ಅಧಿಕಾರಕ್ಕೇರಿಲ್ಲ ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಸಿದ ವ್ಯಕ್ತಿ ದೆಹಲಿಯ ಜವಾಹರಲಾಲ್ ನೆಹರು ಲೀಡರ್ ಶಿಪ್ ಇನ್ ಸ್ಟಿಟ್ಯೂಟ್ ನಲ್ಲಿ ಸ್ಟೇಟ್ ಲೆವೆಲ್ ಮಾಸ್ಟರ್ ಕೋಚ್ ಆಗಿರುವುದನ್ನು ಉಲ್ಲೇಖಿಸಿದ ನ್ಯಾಯಾಧೀಶರು, ನೀವು ಕೆಲಸ ಮಾಡುತ್ತಿರುವ ಸಂಸ್ಥೆಗೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹೆಸರು ಇದೆ. ಯಾಕೆ ನೀವು, ಆ ಸಂಸ್ಥೆಯ ಹೆಸರಿನಿಂದ ಜವಾಹರ್ ಲಾಲ್ ಹೆಸರನ್ನು ತೆಗೆದು ಹಾಕಬೇಕು ಎಂದು ಒತ್ತಾಯ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಮೋದಿ ನಮ್ಮ ದೇಶದ ಪ್ರಧಾನ ಮಂತ್ರಿ. ನಿಮಗೆ ಅವರ ಬಗ್ಗೆ ರಾಜಕೀಯ ವಿರೋಧ ಇರಬಹುದು. ಕೋವಿಡ್ ಸರ್ಟಿಫಿಕೇಟಿನಲ್ಲಿ ಪ್ರಧಾನ ಮಂತ್ರಿಯ ಫೋಟೋ ಹಾಕಿರುವುದರಲ್ಲಿ ಏನು ತೊಂದರೆಯಾಗಿದೆ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ನ್ಯಾಯಾಧೀಶರು ಹೇಳಿದ್ದಾರೆ. ಕೊಟ್ಟಾಯಂ ನಿವಾಸಿ ಪೀಟರ್ ಮಯಲಿಪರಂಬಿಲ್ ಎಂಬವರು ಕೋವಿಡ್ ಸರ್ಟಿಫಿಕೇಟಿನಿಂದ ಮೋದಿ ಫೋಟೋವನ್ನು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದರು.

ಬೇರಾವುದೇ ರಾಷ್ಟ್ರಗಳಲ್ಲಿ ದೇಶದ ಪ್ರಧಾನಿಯ ಫೋಟೋವನ್ನು ಕೋವಿಡ್ ಸರ್ಟಿಫಿಕೇಟಿನಲ್ಲಿ ಅಳವಡಿಸಿಲ್ಲ. ಅಲ್ಲದೆ, ಸರಕಾರದ ಅನುದಾನದಲ್ಲಿ ನೀಡಲಾಗುವ ಯಾವುದೇ ಸೌಲಭ್ಯಗಳಿಗೆ ರಾಜಕೀಯ ವ್ಯಕ್ತಿಯ ಫೋಟೋ ಬಳಸುವುದು ಸ್ವತಂತ್ರ ಮತದಾರನ ಮೇಲೆ ಪ್ರೇರಣೆ ನೀಡಿದಂತಾಗುತ್ತದೆ. ಹೀಗಾಗಿ ಸ್ವತಂತ್ರ ಮತದಾನಕ್ಕೆ ಅವಕಾಶ ಇರುವ ರಾಷ್ಟ್ರದಲ್ಲಿ ಈ ರೀತಿ ಫೋಟೋ ಬಳಕೆಯಿಂದ ಜನರ ಮೇಲೆ ಹೇರಿದಂತಾಗುತ್ತದೆ ಎಂದು ಪೀಟರ್ ಕೋರ್ಟಿನಲ್ಲಿ ವಾದ ಮಂಡಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಟಿವಿಯಲ್ಲಿ ಮೋದಿ ಕಾಣಿಸಿದರೆ ಕಣ್ಣು ಮುಚ್ಚಿಕೊಳ್ಳುತ್ತೀರಾ ಎಂದು ಪ್ರಶ್ನೆ ಮಾಡಿದರು. ಟಿವಿಯಲ್ಲಿ ಮೋದಿ ಚಿತ್ರ ಬಂದರೆ ಕಣ್ಣು ಮುಚ್ಚಿ ಕೊಂಡೇನು. ಆದರೆ, ಸರ್ಟಿಫಿಕೇಟ್ ನನ್ನ ವೈಯಕ್ತಿಕವಾದದ್ದು ಅಲ್ಲವೇ ಎಂದು ಮರು ಪ್ರಶ್ನೆ ಹಾಕಿದರು. ನೀವು ಯಾಕೆ ನಮ್ಮ ದೇಶದ ಪ್ರಧಾನಿ ಬಗ್ಗೆ ನಾಚಿಕೆ ಪಡಬೇಕು. ದೇಶದ 150 ಕೋಟಿ ಜನರಿಗೆ ಉದ್ಭವಿಸಿದ ಪ್ರಶ್ನೆ, ನಿಮಗೆ ಒಬ್ಬರಿಗೆ ಮಾತ್ರ ಯಾಕೆ ಬಂತು ಎಂದು ಕೇಳಿದ್ದಾರೆ.
ಬೇರೆ ಯಾವುದೇ ದೇಶದಲ್ಲಿ ಪ್ರಧಾನಿಯ ಫೋಟೋ ಬಳಸಿಲ್ಲ ಎಂದು ಅರ್ಜಿದಾರ ನ್ಯಾಯಾಧೀಶರ ಮುಂದೆ ಸಾಕ್ಷ್ಯ ಮುಂದಿಟ್ಟಾಗ, ಅವರಿಗೆ ಯಾರಿಗೂ ದೇಶದ ಪ್ರಧಾನಿ ಬಗ್ಗೆ ಹೆಮ್ಮೆ ಇರದೇ ಇರಬಹುದು. ಆದರೆ, ನಮ್ಮ ಪ್ರಧಾನಿ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ. ಯಾಕೆಂದರೆ, ಅವರು ಈ ದೇಶದ ಜನರು ಆಯ್ಕೆ ಮಾಡಿದ್ದರಿಂದಾಗಿ ಪ್ರಧಾನಿಯಾಗಿದ್ದಾರೆ ಎಂದುತ್ತರಿಸಿ, ಅರ್ಜಿಯನ್ನು ವಜಾ ಮಾಡಿದ್ದಾರೆ.
 
            
            
            The Kerala High Court on Monday questioned the credibility of the plea challenging the photograph of Prime Minister Narendra Modi being affixed on the vaccination certificates issued to citizens upon being vaccinated against Covid-19.
 
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm