ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm