ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm