ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm