ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm