ಬ್ರೇಕಿಂಗ್ ನ್ಯೂಸ್
15-09-20 12:58 pm Headline Karnataka News Network ದೇಶ - ವಿದೇಶ
ಅಮರಾವತಿ, ಸೆಪ್ಟಂಬರ್ 15: ಆಂಧ್ರಪ್ರದೇಶದಲ್ಲಿ ವಿಧಾನ ಪರಿಷತ್ ರದ್ದುಗೊಳಿಸಲು ಕೇಂದ್ರ ಸರಕಾರ ಆದಷ್ಟು ಬೇಗ ನಿರ್ಣಯ ತೆಗೆದುಕೊಳ್ಳಬೇಕೆಂದು ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ವೈಎಸ್ಆರ್ ಪಕ್ಷದ ಸಂಸದರಿಗೆ ಜಗನ್ ರೆಡ್ಡಿ ಸೂಚನೆ ನೀಡಿದ್ದಾರೆ. ಎಪಿ ದಿಶಾ ಕ್ರಿಮಿನಲ್ ಲಾ (ತಿದ್ದುಪಡಿ) ಕಾಯ್ದೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ರಾಷ್ಟ್ರಪತಿ ಅಂಕಿತ ಬೀಳುವಂತೆ ಮಾಡಲು ಕೇಂದ್ರವನ್ನು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶ ವಿಧಾನಸಭೆ ಕಳೆದ ಜನವರಿ 27ರಂದು ವಿಧಾನ ಪರಿಷತ್ ರದ್ದುಗೊಳಿಸಲು ನಿರ್ಣಯ ತೆಗೆದುಕೊಂಡಿತ್ತು. ಆದರೆ ಸಂವಿಧಾನಾತ್ಮಕ ಅಂಗವೊಂದನ್ನು ರದ್ದುಪಡಿಸಲು ಕೇಂದ್ರ ಸರಕಾರದ ಅನುಮತಿ ಬೇಕಾಗುತ್ತದೆ. ಅದಕ್ಕಾಗಿ ಈಗ ಸಂಸತ್ತಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವಂತೆ ತನ್ನ ಸಂಸದರಿಗೆ ಜಗನ್ ರೆಡ್ಡಿ ಒತ್ತಾಯಿಸಿದ್ದಾರೆ. 58 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ತೆಲುಗು ದೇಶಂ ಪಕ್ಷದ ಸದಸ್ಯರು ಬಹುಮತ ಹೊಂದಿದ್ದು, ಶಾಸನ ಸಭೆಯಲ್ಲಿ ಪಾಸ್ ಮಾಡಿದ ಪ್ರಮುಖ ಮಸೂದೆಗಳು ಜಾರಿಯಾಗದೆ ಉಳಿದುಕೊಂಡಿವೆ. ಇದಕ್ಕಾಗಿ ವಿಧಾನ ಪರಿಷತ್ತನ್ನೇ ರದ್ದುಪಡಿಸುವ ಅಪಾಯಕಾರಿ ನಡೆಗೆ ಅಲ್ಲಿನ ಮುಖ್ಯಮಂತ್ರಿ ಮುಂದಾಗಿದ್ದಾರೆ.
ಕಳೆದ ವರ್ಷ ಯುವತಿ ಒಬ್ಬಳ ರೇಪ್ ಅಂಡ್ ಮರ್ಡರ್ ಪ್ರಕರಣ ಸಂಚಲನ ಮೂಡಿಸಿದ ಸಂದರ್ಭದಲ್ಲಿ ಶೀಘ್ರ ತನಿಖೆಗಾಗಿ ಆಂಧ್ರ ಪ್ರದೇಶ ಸರಕಾರ ದಿಶಾ ಹೆಸರಲ್ಲಿ ಎಪಿ ದಿಶಾ ಕ್ರಿಮಿನಲ್ ಬಿಲ್ ತಂದಿತ್ತು. ಆದರೆ ಈ ಮಸೂದೆ ರಾಷ್ಟ್ರಪತಿ ಅಂಕಿತ ಸಿಗದೆ ಇನ್ನೂ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ವಿಧಾನ ಪರಿಷತ್ ರದ್ದು ಮತ್ತು ರಾಷ್ಟ್ರಪತಿ ಅಂಕಿತ ಎರಡು ವಿಚಾರದಲ್ಲೂ ಸಂಸತ್ತಿನಲ್ಲಿ ಧ್ವನಿ ಎತ್ತಲು ಸಿಎಂ ಜಗನ್ ರೆಡ್ಡಿ ತಂತ್ರ ರೂಪಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am