ಬ್ರೇಕಿಂಗ್ ನ್ಯೂಸ್
23-12-21 02:47 pm HK Desk news ದೇಶ - ವಿದೇಶ
ಲೂಧಿಯಾನ, ಡಿ.23 : ಕೋರ್ಟ್ ಕಾಂಪ್ಲೆಕ್ಸ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಲೂಧಿಯಾನದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 12.20ರ ಸುಮಾರಿಗೆ ಲೂಧಿಯಾನ ಜಿಲ್ಲೆಯ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಘಟನೆ ನಡೆದಿದೆ. ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗುರುವಾರ ಸ್ಥಳೀಯ ವಕೀಲರು ಮುಷ್ಕರ ನಡೆಸಿದ್ದರಿಂದ ಕೋರ್ಟ್ ಕಟ್ಟಡದಲ್ಲಿ ಹೆಚ್ಚು ಜನ ಇರಲಿಲ್ಲ. ಹೀಗಾಗಿ ಬಾಂಬ್ ಬ್ಲಾಸ್ಟ್ ಸಂದರ್ಭದಲ್ಲಿ ಕಟ್ಟಡದ ಒಳಗೆ ಕೆಲವೇ ಜನರು ಇದ್ದರು.

ಕೋರ್ಟ್ ಕಟ್ಟಡದ ಬಾತ್ ರೂಮಿನಲ್ಲಿ ಸ್ಫೋಟ ಆಗಿದ್ದು, ಅಲ್ಲಿನ ಗೋಡೆ ಮತ್ತು ಕಿಟಕಿ ಛಿದ್ರಗೊಂಡು ಬಿದ್ದಿದೆ. ಅಲ್ಲಿ ಕೆಲಸ ಮಾಡುತ್ತಿದ್ದವರು ಘಟನೆಯಲ್ಲಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ, ನಿಗದಿ ಮೀಟಿಂಗ್ ಬದಿಗಿಟ್ಟು ಲೂಧಿಯಾನಕ್ಕೆ ತೆರಳುತ್ತಿದ್ದೇನೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಶಿಕ್ಷಿಸುತ್ತೇನೆ ಎಂದು ತಿಳಿಸಿದ್ದಾರೆ. ಪಂಜಾಬ್ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರಕಾರ ಪೊಲೀಸರನ್ನು ಅಲರ್ಟ್ ಮಾಡಿತ್ತು.
ಬಾಂಬ್ ಬ್ಲಾಸ್ಟ್ ಘಟನೆ ಹಿನ್ನೆಲೆಯಲ್ಲಿ ಎನ್ಐಎ ಮತ್ತು ಎನ್ ಎಸ್ ಜಿ ಪಡೆಗಳ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಯಾರು ಕೃತ್ಯ ನಡೆಸಿದ್ದಾರೆ, ಯಾವ ಉದ್ದೇಶದಿಂದ ಬಾಂಬ್ ಬ್ಲಾಸ್ಟ್ ನಡೆಸಲಾಗಿದೆ ಎನ್ನುವ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
At least two people are reported to have been killed, while two others have been injured in a suspected IED blast in Ludhiana court complex on Thursday. Initial report said that many more are feared to be injured.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm