ಬ್ರೇಕಿಂಗ್ ನ್ಯೂಸ್
23-12-21 02:47 pm HK Desk news ದೇಶ - ವಿದೇಶ
ಲೂಧಿಯಾನ, ಡಿ.23 : ಕೋರ್ಟ್ ಕಾಂಪ್ಲೆಕ್ಸ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಲೂಧಿಯಾನದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 12.20ರ ಸುಮಾರಿಗೆ ಲೂಧಿಯಾನ ಜಿಲ್ಲೆಯ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಘಟನೆ ನಡೆದಿದೆ. ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗುರುವಾರ ಸ್ಥಳೀಯ ವಕೀಲರು ಮುಷ್ಕರ ನಡೆಸಿದ್ದರಿಂದ ಕೋರ್ಟ್ ಕಟ್ಟಡದಲ್ಲಿ ಹೆಚ್ಚು ಜನ ಇರಲಿಲ್ಲ. ಹೀಗಾಗಿ ಬಾಂಬ್ ಬ್ಲಾಸ್ಟ್ ಸಂದರ್ಭದಲ್ಲಿ ಕಟ್ಟಡದ ಒಳಗೆ ಕೆಲವೇ ಜನರು ಇದ್ದರು.
ಕೋರ್ಟ್ ಕಟ್ಟಡದ ಬಾತ್ ರೂಮಿನಲ್ಲಿ ಸ್ಫೋಟ ಆಗಿದ್ದು, ಅಲ್ಲಿನ ಗೋಡೆ ಮತ್ತು ಕಿಟಕಿ ಛಿದ್ರಗೊಂಡು ಬಿದ್ದಿದೆ. ಅಲ್ಲಿ ಕೆಲಸ ಮಾಡುತ್ತಿದ್ದವರು ಘಟನೆಯಲ್ಲಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ, ನಿಗದಿ ಮೀಟಿಂಗ್ ಬದಿಗಿಟ್ಟು ಲೂಧಿಯಾನಕ್ಕೆ ತೆರಳುತ್ತಿದ್ದೇನೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಶಿಕ್ಷಿಸುತ್ತೇನೆ ಎಂದು ತಿಳಿಸಿದ್ದಾರೆ. ಪಂಜಾಬ್ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರಕಾರ ಪೊಲೀಸರನ್ನು ಅಲರ್ಟ್ ಮಾಡಿತ್ತು.
ಬಾಂಬ್ ಬ್ಲಾಸ್ಟ್ ಘಟನೆ ಹಿನ್ನೆಲೆಯಲ್ಲಿ ಎನ್ಐಎ ಮತ್ತು ಎನ್ ಎಸ್ ಜಿ ಪಡೆಗಳ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಯಾರು ಕೃತ್ಯ ನಡೆಸಿದ್ದಾರೆ, ಯಾವ ಉದ್ದೇಶದಿಂದ ಬಾಂಬ್ ಬ್ಲಾಸ್ಟ್ ನಡೆಸಲಾಗಿದೆ ಎನ್ನುವ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
At least two people are reported to have been killed, while two others have been injured in a suspected IED blast in Ludhiana court complex on Thursday. Initial report said that many more are feared to be injured.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm