ಬ್ರೇಕಿಂಗ್ ನ್ಯೂಸ್
23-12-21 02:47 pm HK Desk news ದೇಶ - ವಿದೇಶ
ಲೂಧಿಯಾನ, ಡಿ.23 : ಕೋರ್ಟ್ ಕಾಂಪ್ಲೆಕ್ಸ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಲೂಧಿಯಾನದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 12.20ರ ಸುಮಾರಿಗೆ ಲೂಧಿಯಾನ ಜಿಲ್ಲೆಯ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಘಟನೆ ನಡೆದಿದೆ. ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗುರುವಾರ ಸ್ಥಳೀಯ ವಕೀಲರು ಮುಷ್ಕರ ನಡೆಸಿದ್ದರಿಂದ ಕೋರ್ಟ್ ಕಟ್ಟಡದಲ್ಲಿ ಹೆಚ್ಚು ಜನ ಇರಲಿಲ್ಲ. ಹೀಗಾಗಿ ಬಾಂಬ್ ಬ್ಲಾಸ್ಟ್ ಸಂದರ್ಭದಲ್ಲಿ ಕಟ್ಟಡದ ಒಳಗೆ ಕೆಲವೇ ಜನರು ಇದ್ದರು.

ಕೋರ್ಟ್ ಕಟ್ಟಡದ ಬಾತ್ ರೂಮಿನಲ್ಲಿ ಸ್ಫೋಟ ಆಗಿದ್ದು, ಅಲ್ಲಿನ ಗೋಡೆ ಮತ್ತು ಕಿಟಕಿ ಛಿದ್ರಗೊಂಡು ಬಿದ್ದಿದೆ. ಅಲ್ಲಿ ಕೆಲಸ ಮಾಡುತ್ತಿದ್ದವರು ಘಟನೆಯಲ್ಲಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ, ನಿಗದಿ ಮೀಟಿಂಗ್ ಬದಿಗಿಟ್ಟು ಲೂಧಿಯಾನಕ್ಕೆ ತೆರಳುತ್ತಿದ್ದೇನೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಶಿಕ್ಷಿಸುತ್ತೇನೆ ಎಂದು ತಿಳಿಸಿದ್ದಾರೆ. ಪಂಜಾಬ್ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರಕಾರ ಪೊಲೀಸರನ್ನು ಅಲರ್ಟ್ ಮಾಡಿತ್ತು.
ಬಾಂಬ್ ಬ್ಲಾಸ್ಟ್ ಘಟನೆ ಹಿನ್ನೆಲೆಯಲ್ಲಿ ಎನ್ಐಎ ಮತ್ತು ಎನ್ ಎಸ್ ಜಿ ಪಡೆಗಳ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಯಾರು ಕೃತ್ಯ ನಡೆಸಿದ್ದಾರೆ, ಯಾವ ಉದ್ದೇಶದಿಂದ ಬಾಂಬ್ ಬ್ಲಾಸ್ಟ್ ನಡೆಸಲಾಗಿದೆ ಎನ್ನುವ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
At least two people are reported to have been killed, while two others have been injured in a suspected IED blast in Ludhiana court complex on Thursday. Initial report said that many more are feared to be injured.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm