ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.

ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.

ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm