ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.

ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.

ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am