ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.

ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.

ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm