ಬ್ರೇಕಿಂಗ್ ನ್ಯೂಸ್
30-12-21 01:56 pm HK Desk news ದೇಶ - ವಿದೇಶ
ಭೋಪಾಲ್, ಡಿ.30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಅವಾಚ್ಯವಾಗಿ ನಿಂದಿಸಿ, ನಾಥುರಾಮ್ ಗೋಡ್ಸೆಯನ್ನು ವೈಭವೀಕರಿಸಿ ಹೇಳಿಕೆ ನೀಡಿದ್ದ ಹಿಂದು ಸಂತ ಕಾಳಿಚರಣ್ ಮಹಾರಾಜ್ ಸ್ವಾಮಿಯನ್ನು ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ.
ಡಿ.25-26ರಂದು ಛತ್ತೀಸ್ ಗಢ ರಾಜಧಾನಿ ರಾಯ್ಪುರದಲ್ಲಿ ನಡೆದಿದ್ದ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಕಾಳಿಚರಣ್ ಮಹಾರಾಜ್, ಭಾರತ ವಿಭಜನೆ, ಹಿಂದು- ಮುಸ್ಲಿಂ ದ್ವೇಷದ ಬಗ್ಗೆ ಮಾತನಾಡಿದ್ದರು. ಅಖಂಡ ಭಾರತವನ್ನು ವಿಭಜಿಸಿದ ಗಾಂಧೀಜಿಯನ್ನು ನಿಂದಿಸುವ ಭರದಲ್ಲಿ ನಾಥುರಾಮ್ ಗೋಡ್ಸೆ ಕೆಲಸವನ್ನು ಅಭಿನಂದಿಸುವುದಾಗಿ ಹೇಳಿದ್ದರು.
ಮಹಾರಾಜ್ ಹೇಳಿಕೆಯ ಬಗ್ಗೆ ಭಾರೀ ಆಕ್ಷೇಪ ಕೇಳಿಬಂದಿದ್ದು, ಛತ್ತೀಸ್ ಗಢ, ಮಹಾರಾಷ್ಟ್ರ ಸೇರಿದಂತೆ ಹಲವು ಕಡೆ ಪೊಲೀಸ್ ದೂರು ದಾಖಲಾಗಿದ್ದು, ಎಫ್ಐಆರ್ ಆಗಿತ್ತು. ಈ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಪೊಲೀಸರು ಮಹಾರಾಜ್ ಬಂಧನಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದರು. ಎರಡು ತಂಡಗಳು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಕ್ಕೆ ಬಂದಿದ್ದವು. ಬಂಧನ ಭೀತಿಯಲ್ಲಿ ಅಡಗಿಕೊಂಡಿದ್ದ ಸ್ವಾಮಿಯ ಪತ್ತೆಗಾಗಿ ಪೊಲೀಸರು ಬೆನ್ನು ಬಿದ್ದಿದ್ದರು. ಮಧ್ಯಪ್ರದೇಶಕ್ಕೆ ಬಂದಿದ್ದ ಪೊಲೀಸರು ಇಂದು ನಸುಕಿನಲ್ಲಿ ಕಾಳಿಚರಣ್ ಮಹಾರಾಜ್ ಸ್ವಾಮಿಯನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಖಜುರಾಹೋ ಬಳಿಯಿಂದ 25 ಕಿಮೀ ದೂರದ ಬಾಗೇಶ್ವರ್ ಧಾಮ್ ಎಂಬಲ್ಲಿ ಕಾಳಿಚರಣ್ ಬಾಡಿಗೆ ಕೊಠಡಿಯಲ್ಲಿದ್ದರು. ಅಲ್ಲಿಂದ ಪೊಲೀಸರು ಇಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ರಾಯ್ಪುರಕ್ಕೆ ಕರೆತರಲಾಗುತ್ತಿದೆ ಎಂದು ರಾಯ್ಪುರ ಎಸ್ಪಿ ಪ್ರಶಾಂತ್ ಅಗರ್ವಾಲ್ ತಿಳಿಸಿದ್ದಾರೆ. ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶಕ್ಕೆ ಬಂದು ಕಾರ್ಯಾಚರಣೆ ನಡೆಸಿದ ವೇಳೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದ್ದೇ ಇದ್ದುದಕ್ಕೆ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದು ಈ ಬಗ್ಗೆ ಛತ್ತೀಸ್ ಗಢ ಸರಕಾರದ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ದೇಶ ಇಸ್ಲಾಮೀಕರಣ ಮಾಡಲು ಹೊರಟಿದ್ದಾರೆ
ರಾಜಕೀಯದ ಮೂಲಕ ದೇಶವನ್ನು ಇಸ್ಲಾಮೀಕರಣ ಮಾಡಲು ಕೆಲವರು ಹೊರಟಿದ್ದಾರೆ. ಮಹಾತ್ಮ ಗಾಂಧೀಜಿಯವರು ಈ ದೇಶವನ್ನು ಮತದ ಆಧಾರದಲ್ಲಿ ವಿಭಜಿಸಿ ಹಾಳು ಮಾಡಿದ್ರು. ಅವರನ್ನು ಕೊಂದ ಗೋಡ್ಸೆಯನ್ನು ನಾನು ಅಭಿನಂದಿಸುತ್ತೇನೆ, ಸೆಲ್ಯೂಟ್ ಹೊಡೆಯುತ್ತೇನೆ ಎಂದು ಕಾಳಿಚರಣ್ ಮಹಾರಾಜ್ ಹೇಳಿಕೆ ನೀಡಿದ್ದರು. ಅಲ್ಲದೆ, ಹಿಂದು ನಾಯಕರನ್ನೇ ಜನರು ಆಯ್ಕೆ ಮಾಡಬೇಕು. ಆಮೂಲಕ ಹಿಂದು ಧರ್ಮವನ್ನು ಉಳಿಸಬೇಕು ಎಂದು ಹೇಳಿದ್ದರು. ಇದೇ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಯ್ಪುರದ ಮಾಜಿ ಮೇಯರ್ ಕೂಡ ಆಗಿರುವ ಕಾಂಗ್ರೆಸ್ ನಾಯಕ ಪ್ರಮೋದ್ ದುಬೇ, ಗಾಂಧೀಜಿಯನ್ನು ನಿಂದಿಸಿದ ಕಾಳಿಚರಣ್ ವಿರುದ್ಧ ಪೊಲೀಸ್ ದೂರು ನೀಡಿದ್ದರು.
Kalicharan Maharaj, who made derogatory remarks against Mahatma Gandhi at a Dharam Sansad, has been arrested by the Raipur Police,
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm