ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm