ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm