ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm