ಬ್ರೇಕಿಂಗ್ ನ್ಯೂಸ್
 
            
                        30-12-21 02:13 pm HK Desk news ದೇಶ - ವಿದೇಶ
 
            ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
 
            
            
            A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm