ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm