ಬ್ರೇಕಿಂಗ್ ನ್ಯೂಸ್
 
            
                        30-12-21 08:57 pm HK Desk news ದೇಶ - ವಿದೇಶ
 
            ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
 
            
            
            France closes mosque after unacceptable preaching.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm