ಬ್ರೇಕಿಂಗ್ ನ್ಯೂಸ್
30-12-21 08:57 pm HK Desk news ದೇಶ - ವಿದೇಶ
ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
France closes mosque after unacceptable preaching.
18-12-25 02:26 pm
HK News Desk
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm