ಬ್ರೇಕಿಂಗ್ ನ್ಯೂಸ್
30-12-21 08:57 pm HK Desk news ದೇಶ - ವಿದೇಶ
ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
France closes mosque after unacceptable preaching.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm