ಬ್ರೇಕಿಂಗ್ ನ್ಯೂಸ್
30-12-21 08:57 pm HK Desk news ದೇಶ - ವಿದೇಶ
ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
France closes mosque after unacceptable preaching.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm