ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am