ಬ್ರೇಕಿಂಗ್ ನ್ಯೂಸ್
30-12-21 10:37 pm HK Desk news ದೇಶ - ವಿದೇಶ
ದೆಹಲಿ, ಡಿ.30 : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಅಂದ್ರೆ, ಪ್ರತಿ ಬಾರಿ ಪ್ರಧಾನಿ ಸ್ವಾತಂತ್ರ್ಯದ ಧ್ವಜಾರೋಹಣ ಮಾಡುವ ಕೇಂದ್ರ. ಅತ್ಯಂತ ಸುಂದರ ವಾಸ್ತುಶಿಲ್ಪ, ಮೊಘಲರ ಕಾಲದ ಬೃಹತ್ ಕೋಟೆ ಕೆಂಪುಕೋಟೆಯೆಂದೇ ಜನಜನಿತ. ಆದರೆ, ಮೊಘಲರ ರಾಜ ಶಹಜಹಾನ್ ಕಟ್ಟಿರುವ ಈ ಕೆಂಪು ಕೋಟೆ ತನಗೆ ಸೇರಿದ್ದು ಎಂದು ಇಲ್ಲೊಬ್ಬರು ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದಾಳೆ.
ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಗುಡಿಸಲಿನಲ್ಲಿ ವಾಸವಿರುವ ವಿಧವೆ ಮಹಿಳೆ ಸುಲ್ತಾನಾ ಬೇಗಂ ಎನ್ನುವಾಕೆಯೇ ಈ ತಗಾದೆ ತೆಗೆದವರು. ದೆಹಲಿಯನ್ನಾಳಿದ್ದ ಕೊನೆಯ ಮೊಘಲ್ ರಾಜ ಬಹಾದುರ್ ಷಾ ಝರಾಫ್ ಅವರ ಮರಿ ಮೊಮ್ಮಗನ ಪತ್ನಿಯೆಂದು ಹೇಳಿಕೊಂಡಿರುವ ಬೇಗಂ ಕೆಂಪುಕೋಟೆ ತನಗೆ ಸೇರಬೇಕು ಎಂದು ಹಲವು ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಕೋಟೆಯನ್ನು ತನಗೆ ಕೊಡಲು ಸಾಧ್ಯವಾಗದಿದ್ದರೆ, ಅದರ ಬದಲಿಗೆ ಹಣದ ಪರಿಹಾರ ನೀಡಲಿ ಎಂದು ಆಕೆ ಹೇಳಿದ್ದಾರೆ.
ಆದರೆ ಈಕೆಯ ಅರ್ಜಿ ನೋಡಿದ ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ರೇಖಾ ಪಳ್ಳಿ, 150 ವರ್ಷಗಳ ಸುದೀರ್ಘ ಸಮಯದ ಬಳಿಕ ಕೋಟೆಯ ಬಗ್ಗೆ ಹಕ್ಕು ಸ್ಥಾಪಿಸುವುದು ನ್ಯಾಯ ಸಮ್ಮತವಲ್ಲ. ಇದನ್ನು ಪರಿಗಣಿಸಲು ಸಾಧ್ಯವೂ ಇಲ್ಲ ಎಂದು ಅರ್ಜಿಯನ್ನು ವಜಾ ಮಾಡಿದ್ದಾರೆ. ಸುಲ್ತಾನಾ ಬೇಗಂ ಪರ ವಕೀಲರ ಪ್ರಕಾರ, ಸುಲ್ತಾನಾ ಬೇಗಂ ಪತಿ ಮಿರ್ಜಾ ಮೊಹಮ್ಮದ್ ಬೇಡರ್ ಬಕ್ತ್ , ಕೊನೆಯ ಮೊಘಲ್ ರಾಜ ಬಹಾದುರ್ ಷಾ ಅವರ ಮರಿ ಮೊಮ್ಮಗ. 1980ರಲ್ಲಿ ಮಿರ್ಜಾ ಮೊಹಮ್ಮದ್ ನಿಧನದ ನಂತರ ಸುಲ್ತಾನಾ ಬೇಗಂ ಅವರಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪಿಂಚಣಿ ನೀಡಲಾಗುತ್ತಿತ್ತು. 1857ರಲ್ಲಿ ಬ್ರಿಟಿಷರು ಮೊಘಲರನ್ನು ಸೋಲಿಸಿ, ಅವರ ಆಸ್ತಿಗಳನ್ನು ವಶಕ್ಕೆ ಪಡೆದ ಬಳಿಕ ನಮ್ಮ ಆಸ್ತಿಯನ್ನು ಮರಳಿಸಿಲ್ಲ ಎಂದು ಸುಲ್ತಾನಾ ಬೇಗಂ ಅರ್ಜಿಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಶ್ನೆ ಮಾಡಿದ ನ್ಯಾಯಾಧೀಶರು, 1857ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯಿಂದ ವಂಚನೆ ಆಗಿದ್ದರೆ ಅದನ್ನು ಈಗ ಕೇಳುವುದರಲ್ಲಿ ಯಾವ ನ್ಯಾಯವಿದೆ.. 150 ವರ್ಷಗಳ ಕಾಲ ನೀವು ಎಲ್ಲಿ ಹೋಗಿದ್ದಿರಿ. ನೀವು ಯಾಕೆ ಹಕ್ಕು ಸ್ಥಾಪಿಸಲು ಬಂದಿಲ್ಲ ಎಂದು ಪ್ರಶ್ನೆ ಮಾಡಿದರಲ್ಲದೆ, ಈ ಬಗ್ಗೆ ಪರಿಹಾರ ಕೇಳುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ.
A woman from Delhi, claiming to be the widow of the great grandson of the last Mughal King Bahadur Shah Zaraf II recently approached the court and asked for reparations. Sultana Begum claimed ownership of the Red Fort and asked the court to hand it over to her. She said that if this was not possible, she would like to get monetary compensation.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm