ಬ್ರೇಕಿಂಗ್ ನ್ಯೂಸ್
01-01-22 01:16 pm HK Desk news ದೇಶ - ವಿದೇಶ
ಶ್ರೀನಗರ, ಜ.1 : ಉತ್ತರ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ನಡುವೆ ಕಾಲ್ತುಳಿತ ನಡೆದಿದ್ದು, 12 ಮಂದಿ ಯಾತ್ರಿಗಳು ಸಾವಿಗೀಡಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಹೊಸ ವರ್ಷ ಹಿನ್ನೆಲೆಯಲ್ಲಿ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು. ಆದರೆ ತಡರಾತ್ರಿ 2 ಗಂಟೆ ಸುಮಾರಿಗೆ ಜನದಟ್ಟಣೆಯ ನಡುವೆ ಭಾರೀ ಕಾಲ್ತುಳಿತ ನಡೆದಿದೆ. ಜನರ ನಡುವೆ ವಾಗ್ಯುದ್ಧ ನಡೆದು ತಳ್ಳಾಟ ಆಗಿದ್ದು ಆನಂತರ ಕಾಲ್ತುಳಿತ ನಡೆದಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ದಿಲ್ ಭಾಗ್ ಸಿಂಗ್ ತಿಳಿಸಿದ್ದಾರೆ. ಮೃತ 12 ಮಂದಿಯಲ್ಲಿ ಎಂಟು ಮಂದಿಯ ಗುರುತು ಪತ್ತೆಯಾಗಿದೆ. ಪಂಜಾಬ್, ಹರ್ಯಾಣ, ದೆಹಲಿ ಮತ್ತು ಜಮ್ಮು ಕಾಶ್ಮೀರದ ಒಬ್ಬ ವ್ಯಕ್ತಿ ಮೃತರು.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ, ಮೃತರಿಗೆ ಕೇಂದ್ರ ಸರಕಾರದ ವತಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ, ಜಮ್ಮು ಕಾಶ್ಮೀರ ಸರಕಾರದಿಂದ ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಅಲ್ಲದೆ, ಗಾಯಾಳುಗಳಿಗೆ ತಲಾ ಎರಡು ಲಕ್ಷ ಪರಿಹಾರ ನೀಡುವುದಾಗಿ ಹೇಳಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ಗವರ್ನರ್ ಮನೋಜ್ ಸಿನ್ಹಾ ಆದೇಶ ಮಾಡಿದ್ದಾರೆ. ತನಿಖೆಗೆ ಮುಖ್ಯ ಕಾರ್ಯದರ್ಶಿ ಮತ್ತು ಜಮ್ಮು ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದಾರೆ.
At least 12 were killed in a stampede at Mata Vaishno Devi shrine in Jammu & Kashmir on Saturday. Stampede triggered by a massive rush of devotees, officials said.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm