ಬ್ರೇಕಿಂಗ್ ನ್ಯೂಸ್
01-01-22 01:39 pm HK Desk news ದೇಶ - ವಿದೇಶ
ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm