ಬ್ರೇಕಿಂಗ್ ನ್ಯೂಸ್
 
            
                        01-01-22 01:39 pm HK Desk news ದೇಶ - ವಿದೇಶ
 
            ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
 
            
            
            India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm