ಬ್ರೇಕಿಂಗ್ ನ್ಯೂಸ್
 
            
                        04-01-22 07:35 pm HK Desk news ದೇಶ - ವಿದೇಶ
 
            ನವದೆಹಲಿ, ಜ.4 : ಒಂದೆಡೆ 15ರಿಂದ 18ರ ನಡುವಿನ ಮಕ್ಕಳಿಗೂ ಕೋವಿಡ್ ಲಸಿಕೆ ನೀಡುವುದನ್ನು ದೇಶಾದ್ಯಂತ ಆರಂಭಿಸಲಾಗಿದೆ. ಇದೇ ವೇಳೆ, ಲಸಿಕೆಯ ಬಳಕೆಯ ಅವಧಿಯನ್ನು ಏಕಾಏಕಿ 9ರಿಂದ 12 ತಿಂಗಳಿಗೆ ಹೆಚ್ಚಿಸಲಾಗಿದೆ. ಹೀಗಾಗಿ ಭಾರತ್ ಬಯೋಟೆಕ್ ಕಂಪನಿ ತನ್ನಲ್ಲಿ ಉತ್ಪಾದಿಸಿ ಬಳಕೆಯಾಗದೇ ಅವಧಿ ಮೀರಿದ್ದ ಕೋವ್ಯಾಕ್ಸಿನ್ ಲಸಿಕೆಗಳನ್ನು ಹಿಂಪಡೆದು ಬಳಕೆ ಅವಧಿ (Expiry) ದಿನಾಂಕವನ್ನು ಮರು ಮುದ್ರಿಸಿ ಲೇಬಲ್ ಮಾಡುತ್ತಿದೆ ಎಂಬುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಭಾರತೀಯ ಔಷಧಿ ನಿಯಂತ್ರಕ ಸಂಸ್ಥೆಯು ಕೋವಿಡ್ ಲಸಿಕೆಯ ಅವಧಿಯನ್ನು 9ರಿಂದ 12 ತಿಂಗಳಿಗೆ ಹೆಚ್ಚಿಸಿದ ಬೆನ್ನಲ್ಲೇ ಕಂಪನಿಗಳು ತಮ್ಮಲ್ಲಿ ಉಳಿದಿರುವ ಲಸಿಕೆಯ ಬಾಟಲಿಗಳ ಲೇಬಲ್ ಬದಲಿಸಿ, ಮತ್ತೆ ಮಾರುಕಟ್ಟೆಗೆ ಬಿಡಲು ಚಿಂತನೆ ನಡೆಸಿವೆ. ಲಸಿಕೆಯ ಸಾಮರ್ಥ್ಯ ಪರಿಶೀಲನೆಯ ಬಳಿಕ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅಧಿಕಾರಿಗಳು, ಲಸಿಕೆಯನ್ನು 12 ತಿಂಗಳ ವರೆಗೂ ಬಳಸಲು ಯೋಗ್ಯವಾಗಿದೆ ಎಂದು ವರದಿ ನೀಡಿದ್ದರು.
ಈ ಹಿಂದೆ ಕೋವಿಡ್ ಲಸಿಕೆಯನ್ನು ಕೇವಲ ಆರು ತಿಂಗಳಿಗೆ ಮಾತ್ರ ಬಳಸಲು ಅವಕಾಶ ನೀಡಲಾಗಿತ್ತು. ಯಾವುದೇ ಔಷಧಿ ಅಥವಾ ಲಸಿಕೆಗಳು ತನ್ನ ಬಳಕೆಯ ಅವಧಿಯ ಬಗ್ಗೆ ಮೊದಲೇ ಘೋಷಣೆ ಮಾಡಿರುತ್ತವೆ. ಅದಕ್ಕಾಗಿ ಎಕ್ಸ್ ಪೈರಿ ದಿನಾಂಕವನ್ನು ಔಷಧಿ ಬಾಟಲಿಯ ಹೊರಮೈಯಲ್ಲಿ ಹಾಕಲಾಗಿರುತ್ತದೆ. ವಿವಿಧ ರೀತಿಯ ಪರಿಸರ ಮತ್ತು ಉಷ್ಣತೆಯ ನಡುವೆ ಎಷ್ಟು ಸಮಯ ಕಾಲ ಲಸಿಕೆ ಬಾಳಿಕೆ ಬರಬಹುದು ಎನ್ನುವುದನ್ನು ಪರಿಶೀಲಿಸಿ ಮೊದಲೇ ಈ ದಿನಾಂಕ ನಿಗದಿ ಪಡಿಸಲಾಗಿರುತ್ತದೆ.
ಈ ನಡುವೆ, ಕಳೆದ ನವೆಂಬರ್ ತಿಂಗಳಲ್ಲಿ ಭಾರತ್ ಬಯೋಟೆಕ್ ಉತ್ಪಾದಿತ ಕೋವ್ಯಾಕ್ಸಿನ್ ಬಳಕೆಯನ್ನು 12 ತಿಂಗಳಿಗೆ ಹೆಚ್ಚಿಸುವ ಬಗ್ಗೆ ಸರಕಾರದಿಂದಲೇ ಗ್ರೀನ್ ಸಿಗ್ನಲ್ ಪಡೆದಿತ್ತು. ಇದರ ಬೆನ್ನಲ್ಲೇ ದೇಶದ ವಿವಿಧ ಕಡೆ ಬಳಕೆಯಾಗದೇ ಬಾಕಿ ಉಳಿದಿದ್ದ ಕೋವ್ಯಾಕ್ಸಿನ್ ಲಸಿಕೆಯನ್ನು ಹಿಂಪಡೆದು ಅದರ ಲೇಬಲನ್ನು ತೆಗೆದು, ಹೊಸತಾಗಿ ಎಕ್ಸ್ ಪೈರಿ ದಿನಾಂಕ ಮುದ್ರಿಸಲು ಕಂಪನಿ ತೊಡಗಿದೆ. ಹೀಗೆ ಉಳಿದಿದ್ದ ಲಸಿಕೆಯ ಸಂಗ್ರಹವನ್ನು 15ರಿಂದ 18ರ ಒಳಗಿನ ಮಕ್ಕಳಿಗೆ ನೀಡಲು ಸರಕಾರ ಮುಂದಾಗಿದೆ. ಈಗಾಗ್ಲೇ ಮಕ್ಕಳ ಲಸಿಕಾ ಅಭಿಯಾನಕ್ಕೆ 6 ಲಕ್ಷಕ್ಕೂ ಹೆಚ್ಚು ಮಂದಿ ಕೋವಿನ್ ಏಪ್ ನಲ್ಲಿ ನೋಂದಣಿ ಮಾಡಿಕೊಂಡಿದ್ದು, ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲು ಶಿಫಾರಸು ಮಾಡಲಾಗಿದೆ.
 
            
            
            Bharat Biotech is picking up unused stocks of Covaxin and updating the expiry date on the labels after the vaccine's shelf life was extended.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm