ಬ್ರೇಕಿಂಗ್ ನ್ಯೂಸ್
08-01-22 07:03 pm HK Desk news ದೇಶ - ವಿದೇಶ
ನವದೆಹಲಿ, ಜ.8 : ಬಹು ನಿರೀಕ್ಷಿತ ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಏಳು ಹಂತದ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಫೆಬ್ರವರಿ 7ರಿಂದ ತೊಡಗಿ ಮಾರ್ಚ್ 7ರ ವರೆಗೆ ಚುನಾವಣೆ ನಡೆಯಲಿದ್ದು, ಐದು ರಾಜ್ಯಗಳ ಫಲಿತಾಂಶ ಮಾರ್ಚ್ 10ರಂದು ಒಂದೇ ದಿನ ಪ್ರಕಟವಾಗಲಿದೆ.
ಅತಿ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ ಫೆ.7ರಿಂದ ಮಾರ್ಚ್ 7ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಫೆ.14ರಂದು ಒಂದೇ ದಿನ ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆ.27 ಮತ್ತು ಮಾರ್ಚ್ 3ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯನ್ನು ಮಾರ್ಚ್ 10ರಂದು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಇದೇ ವೇಳೆ, ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಜನವರಿ 15ರ ವರೆಗೆ ಯಾವುದೇ ರೀತಿಯ ರಾಜಕೀಯ ರ್ಯಾಲಿ, ಸಭೆ, ರೋಡ್ ಶೋ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಆನಂತರ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ತಿಳಿಸಿದ್ದಾರೆ. ಈ ಐದು ರಾಜ್ಯಗಳಲ್ಲಿ 2017ರಲ್ಲಿ ಇದೇ ತಿಂಗಳಲ್ಲಿ ಚುನಾವಣೆ ನಡೆದಿತ್ತು.
ಚುನಾವಣೆಗಳಲ್ಲಿ ಪಾಲ್ಗೊಳ್ಳುವ ಸಿಬಂದಿ ಎರಡು ಡೋಸ್ ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಡೋಸ್ ಪಡೆದಿರಬೇಕು. ಅಲ್ಲದೆ, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ತಜ್ಞರ ಪ್ರಕಾರ, ಫೆಬ್ರವರಿಯಲ್ಲಿ ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರಲಿದ್ದಾರೆ ಎನ್ನಲಾಗುತ್ತಿದೆ.
ಉತ್ತರ ಪ್ರದೇಶದಲ್ಲಿ 403 ಅಸೆಂಬ್ಲಿ ಕ್ಷೇತ್ರಗಳು, ಪಂಜಾಬ್ ನಲ್ಲಿ 117, ಉತ್ತರಾಖಂಡದಲ್ಲಿ 70, ಮಣಿಪುರದಲ್ಲಿ 60, ಗೋವಾದಲ್ಲಿ 40 ವಿಧಾನಸಭೆ ಕ್ಷೇತ್ರಗಳಲ್ಲಿ ಶಾಸಕರ ಆಯ್ಕೆ ನಡೆಯಲಿದೆ. ಐದು ರಾಜ್ಯಗಳಲ್ಲಿ ಅಂದಾಜು 18.34 ಕೋಟಿ ಮತದಾರರಿದ್ದು, ಅಲ್ಲಿನ ಆಡಳಿತದ ಭವಿಷ್ಯ ನಿರ್ಧರಿಸಲಿದ್ದಾರೆ. ಕಳೆದ ಬಾರಿ ಪಶ್ಚಿಮ ಬಂಗಾಳ ಚುನಾವಣೆ ಬಳಿ ಕೋವಿಡ್ ಸ್ಥಿತಿ ಬಿಗಡಾಯಿಸಿದ್ದರಿಂದ ಈ ಬಾರಿ ಆಯೋಗ ಮುನ್ನೆಚ್ಚರಿಕೆ ವಹಿಸಿದೆ. ಚುನಾವಣಾ ರ್ಯಾಲಿಯನ್ನು ಪೂರ್ತಿಯಾಗಿ ನಿಷೇಧಿಸುವ ಸಾಧ್ಯತೆ ಹೆಚ್ಚಿದೆ.
The Election Commission of India (ECI) Saturday announced the schedule for the assembly elections in Goa, Punjab, Manipur, Uttarakhand and Uttar Pradesh. While UP will go to polls in seven phases from February 10 to March 7, Punjab, Uttarakhand and Goa will vote in a single phase on February 14. Manipur, on the other hand, will vote in two phases on Feb 27 and March 3. The counting of votes will be held on March 10, the poll body added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm