ಬ್ರೇಕಿಂಗ್ ನ್ಯೂಸ್
09-01-22 10:25 pm HK Desk news ದೇಶ - ವಿದೇಶ
ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ಸುದೀರ್ಘ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಸೃಷ್ಟಿಸಿದ್ದಾರೆ.
ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.
ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್, ಸುರೇಶ್, ಸೈನನ್ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.
ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Joseph (58), a fisherman from Tamil Nadu, who fell into the sea while fishing, reached the shore after swimming for 30 hours in the sea.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm