ಬ್ರೇಕಿಂಗ್ ನ್ಯೂಸ್
09-01-22 10:25 pm HK Desk news ದೇಶ - ವಿದೇಶ
ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ಸುದೀರ್ಘ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಸೃಷ್ಟಿಸಿದ್ದಾರೆ.
ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.
ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್, ಸುರೇಶ್, ಸೈನನ್ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.
ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Joseph (58), a fisherman from Tamil Nadu, who fell into the sea while fishing, reached the shore after swimming for 30 hours in the sea.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm