ಬ್ರೇಕಿಂಗ್ ನ್ಯೂಸ್
10-01-22 11:11 pm HK Desk news ದೇಶ - ವಿದೇಶ
ಪಾಟ್ನಾ, ಜ.9 : ಕಳೆದ ಒಂದು ವರ್ಷದಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲಾಗುತ್ತಿದೆ. ಸರಕಾರ, ಒಬ್ಬರಿಗೆ ಎರಡು ಬಾರಿ ಉಚಿತ ಲಸಿಕೆ ನೀಡುತ್ತಿದೆ. ಆದರೆ, ಇದರ ದುರ್ಲಾಭವನ್ನು ಪಡೆದ ಮುದುಕನೊಬ್ಬ ಒಂದೇ ವರ್ಷದಲ್ಲಿ ಹನ್ನೊಂದು ಬಾರಿ ಲಸಿಕೆ ಪಡೆದು ಹುಬ್ಬೇರಿಸಿದ್ದಾನೆ.
ಬಿಹಾರದ ಮಾದೇಪುರ ಜಿಲ್ಲೆಯ ಬ್ರಹ್ಮದೇವ ಮಂಡಲ ಎಂಬ 84 ವರ್ಷದ ಮುದುಕ ಈ ವಿಚಿತ್ರ ಸಾಧನೆ ಮಾಡಿದವರು. ಮಾಧೇಪುರ ಜಿಲ್ಲೆಯ ಪುರಿಣಿಯ ನಿವಾಸಿ. ಇವರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11 ಬಾರಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಪ್ರತಿ ಬಾರಿ ಲಸಿಕೆ ಹಾಕಿದಾಗ ಆರೋಗ್ಯವಾಗಿದ್ದಾರೆ ಎಂದಿದ್ದರು. ತನ್ನ ಆರೋಗ್ಯ ಸರಿ ಇಲ್ಲದಿದ್ದಾಗ ನಕಲಿ ದಾಖಲೆಗಳ ತೋರಿಸಿ ಲಸಿಕೆ ಹಾಕಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿ ಡಾ. ವಿನಯ ಕೃಷ್ಣ ಪ್ರಸಾದ್, ಪುರಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಳೆದ ವರ್ಷ ಫೆಬ್ರವರಿ 13 ರಂದು ಇವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿತ್ತು. ಇದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 13ರಂದು ಎರಡನೇ ಡೋಸ್ ಲಸಿಕೆ ಹಾಕಲಾಗಿತ್ತು. ನಂತರ ಅವರು ಹೊಸ ಆರೋಗ್ಯ ಕೇಂದ್ರವನ್ನು ಆಯ್ಕೆ ಮಾಡಿದ್ದು ಮೇ 19 ರಂದು ಮೂರನೇ ಡೋಸ್ ಪಡೆದಿದ್ದರು. ಆನಂತರ ಜೂನ್ 16, ಜುಲೈ 24, ಆಗಸ್ಟ್ 31, ಸೆಪ್ಟೆಂಬರ್ 11 ಮತ್ತು ಅದೇ ತಿಂಗಳ 22 ಮತ್ತು 24 ರಂದು ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
ಜನವರಿ ತಿಂಗಳ ಮೊದಲ ವಾರ 12 ನೇ ಬಾರಿ ಕೋವಿಡ್ ಲಸಿಕೆ ಪಡೆಯಲು ಬಂದಾಗ ಆರೋಗ್ಯ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದು ಪರಿಶೀಲನೆ ನಡೆಸಿದಾಗ ಮುದುಕನ ಅಪರಾವತಾರ ತಿಳಿದುಬಂದಿದೆ.
ಬ್ರಹ್ಮದೇವ್, ಅಂಚೆ ಇಲಾಖೆಯಲ್ಲಿ ಕೆಲಸದಲ್ಲಿದ್ದು ನಿವೃತ್ತನಾಗಿದ್ದು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯದಿಂದಾಗಿ ಈ ರೀತಿ ಲಸಿಕೆ ಪಡೆಯುವಂತಾಗಿತ್ತು. ತನಗೆ ಆರೋಗ್ಯ ತೊಂದರೆ ಇದ್ದುದರಿಂದ ಪದೇ ಪದೇ ಲಸಿಕೆ ಪಡೆದಿದ್ದು ಸ್ವಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ.
84-year-old man, Brahamdev Mandal, a resident of the Puraini area of Madhepura district in Bihar who claims to have taken 11 doses of the coronavirus vaccine has been booked by Bihar Police.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am