ಬ್ರೇಕಿಂಗ್ ನ್ಯೂಸ್
 
            
                        10-01-22 11:11 pm HK Desk news ದೇಶ - ವಿದೇಶ
 
            ಪಾಟ್ನಾ, ಜ.9 : ಕಳೆದ ಒಂದು ವರ್ಷದಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲಾಗುತ್ತಿದೆ. ಸರಕಾರ, ಒಬ್ಬರಿಗೆ ಎರಡು ಬಾರಿ ಉಚಿತ ಲಸಿಕೆ ನೀಡುತ್ತಿದೆ. ಆದರೆ, ಇದರ ದುರ್ಲಾಭವನ್ನು ಪಡೆದ ಮುದುಕನೊಬ್ಬ ಒಂದೇ ವರ್ಷದಲ್ಲಿ ಹನ್ನೊಂದು ಬಾರಿ ಲಸಿಕೆ ಪಡೆದು ಹುಬ್ಬೇರಿಸಿದ್ದಾನೆ.
ಬಿಹಾರದ ಮಾದೇಪುರ ಜಿಲ್ಲೆಯ ಬ್ರಹ್ಮದೇವ ಮಂಡಲ ಎಂಬ 84 ವರ್ಷದ ಮುದುಕ ಈ ವಿಚಿತ್ರ ಸಾಧನೆ ಮಾಡಿದವರು. ಮಾಧೇಪುರ ಜಿಲ್ಲೆಯ ಪುರಿಣಿಯ ನಿವಾಸಿ. ಇವರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11 ಬಾರಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಪ್ರತಿ ಬಾರಿ ಲಸಿಕೆ ಹಾಕಿದಾಗ ಆರೋಗ್ಯವಾಗಿದ್ದಾರೆ ಎಂದಿದ್ದರು. ತನ್ನ ಆರೋಗ್ಯ ಸರಿ ಇಲ್ಲದಿದ್ದಾಗ ನಕಲಿ ದಾಖಲೆಗಳ ತೋರಿಸಿ ಲಸಿಕೆ ಹಾಕಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿ ಡಾ. ವಿನಯ ಕೃಷ್ಣ ಪ್ರಸಾದ್, ಪುರಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಳೆದ ವರ್ಷ ಫೆಬ್ರವರಿ 13 ರಂದು ಇವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿತ್ತು. ಇದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 13ರಂದು ಎರಡನೇ ಡೋಸ್ ಲಸಿಕೆ ಹಾಕಲಾಗಿತ್ತು. ನಂತರ ಅವರು ಹೊಸ ಆರೋಗ್ಯ ಕೇಂದ್ರವನ್ನು ಆಯ್ಕೆ ಮಾಡಿದ್ದು ಮೇ 19 ರಂದು ಮೂರನೇ ಡೋಸ್ ಪಡೆದಿದ್ದರು. ಆನಂತರ ಜೂನ್ 16, ಜುಲೈ 24, ಆಗಸ್ಟ್ 31, ಸೆಪ್ಟೆಂಬರ್ 11 ಮತ್ತು ಅದೇ ತಿಂಗಳ 22 ಮತ್ತು 24 ರಂದು ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
ಜನವರಿ ತಿಂಗಳ ಮೊದಲ ವಾರ 12 ನೇ ಬಾರಿ ಕೋವಿಡ್ ಲಸಿಕೆ ಪಡೆಯಲು ಬಂದಾಗ ಆರೋಗ್ಯ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದು ಪರಿಶೀಲನೆ ನಡೆಸಿದಾಗ ಮುದುಕನ ಅಪರಾವತಾರ ತಿಳಿದುಬಂದಿದೆ. 
ಬ್ರಹ್ಮದೇವ್, ಅಂಚೆ ಇಲಾಖೆಯಲ್ಲಿ ಕೆಲಸದಲ್ಲಿದ್ದು ನಿವೃತ್ತನಾಗಿದ್ದು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯದಿಂದಾಗಿ ಈ ರೀತಿ ಲಸಿಕೆ ಪಡೆಯುವಂತಾಗಿತ್ತು. ತನಗೆ ಆರೋಗ್ಯ ತೊಂದರೆ ಇದ್ದುದರಿಂದ ಪದೇ ಪದೇ ಲಸಿಕೆ ಪಡೆದಿದ್ದು ಸ್ವಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ. 
 
            
            
            84-year-old man, Brahamdev Mandal, a resident of the Puraini area of Madhepura district in Bihar who claims to have taken 11 doses of the coronavirus vaccine has been booked by Bihar Police.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm