ಬ್ರೇಕಿಂಗ್ ನ್ಯೂಸ್
11-01-22 09:55 pm HK Desk news ದೇಶ - ವಿದೇಶ
ಲಕ್ನೋ, ಜ.11 : ಉತ್ತರ ಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಸರಕಾರದಲ್ಲಿ ಹಿಂದುಳಿದ ವರ್ಗದ ಸಚಿವರೊಬ್ಬರು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಎಸ್ಸಿ ಮೋರ್ಚಾದಲ್ಲಿ ಗುರುತಿಸಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಸಮಾಜವಾದಿ ಪಾರ್ಟಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್, ಸ್ವಾಮಿ ಪ್ರಸಾದ್ ಮೌರ್ಯ ನಡೆಯನ್ನು ಸ್ವಾಗತಿಸಿದ್ದಾರೆ. ಮೌರ್ಯ, ಸದ್ಯದಲ್ಲೇ ಸಮಾಜವಾದಿ ಪಾರ್ಟಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಸ್ವಾಮಿ ಪ್ರಸಾದ್ ಮೌರ್ಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ, ಬಿಜೆಪಿ ಬಿಟ್ಟು ಹೋಗುತ್ತಿದ್ದಾರೆ ಎನ್ನುವುದು ಖಚಿಚವಾಗುತ್ತಿದ್ದಂತೆ ಬಿಜೆಪಿಯಿಂದ ಇತರ ಮೂವರು ಶಾಸಕರು ರಾಜಿನಾಮೆ ನೀಡಿದ್ದಾರೆ. ರೋಶನ್ ಲಾಲ್ ವರ್ಮಾ, ಬ್ರಜೇಶ್ ಪ್ರಜಾಪತಿ, ಭಗವತಿ ಸಾಗರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದವರು. ಅವರು ಕೂಡ ಸಮಾಜವಾದಿ ಪಾರ್ಟಿ ಸೇರಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಶಾಸಕರಾದ ಮಾಧುರಿ ವರ್ಮಾ ಮತ್ತು ರಾಧಾಕೃಷ್ಣ ಶರ್ಮಾ ಬಿಜೆಪಿ ತೊರೆದಿದ್ದು, ಎಸ್ಪಿ ಸೇರ್ಪಡೆಯಾಗಿದ್ದರು. ಇನ್ನೂ ಕೆಲವು ಬಿಜೆಪಿ ಶಾಸಕರು ಪಕ್ಷ ತೊರೆಯಲಿದ್ದಾರೆ ಎನ್ನಲಾಗುತ್ತಿದೆ.
13 ಜನ ಬಿಜೆಪಿ ತೊರೆಯಲಿದ್ದಾರೆ !
ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದಂತೆ ಇತ್ತ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಇನ್ನೂ 13 ಶಾಸಕರು ಬಿಜೆಪಿ ತೊರೆಯಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ಚುನಾವಣೆಯಲ್ಲಿ ಇದರ ಫಲಿತಾಂಶ ಕಾಣಲಿದ್ದೇವೆ. ಚುನಾವಣೆಗೂ ಮುನ್ನ ಕೋಮು ಧ್ರುವೀಕರಣಕ್ಕೆ ಯತ್ನ ನಡೆದಿದೆ. ಆದರೆ, ಮತದಾರರು ಇದಕ್ಕೆ ತಕ್ಕ ಬೆಲೆ ನೀಡಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಸಮಾಜವಾದಿ ಜೊತೆ ಸೇರಿ ಎನ್ ಸಿಪಿ ಸ್ಪರ್ಧೆ ಇದಲ್ಲದೆ, ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಾರ್ಟಿ ಮತ್ತು ಇತರ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆ ಎದುರಿಸಲಿದ್ದೇವೆ. ಗೋವಾದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಜೊತೆ ಮೈತ್ರಿಗೆ ಮಾತುಕತೆ ನಡೆಸಿದ್ದೇವೆ. ನಾವು ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಶರದ್ ಪವಾರ್ ಹೇಳಿದ್ದಾರೆ. ಮಣಿಪುರ, ಗೋವಾ, ಉತ್ತರ ಪ್ರದೇಶದಲ್ಲಿ ಎನ್ ಸಿಪಿ ಸ್ಪರ್ಧೆ ಮಾಡಲಿದೆ ಎಂದು ಪವಾರ್ ತಿಳಿಸಿದ್ದಾರೆ.
Uttar Pradesh Minister Swami Prasad Maurya resigned from the state cabinet on Tuesday afternoon and is all set to join the Samajwadi Party. Party’s chief Akhilesh Yadav welcomed the leader to SP and tweeted,”Warm welcome and greetings to the popular leader Shri Swami Prasad Maurya Ji, who fought for social justice and equality and all the other leaders.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm