ಬ್ರೇಕಿಂಗ್ ನ್ಯೂಸ್
12-01-22 10:58 pm HK Desk news ದೇಶ - ವಿದೇಶ
ಲಕ್ನೋ, ಜ.12 : ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಸಚಿವ ತಮ್ಮ ಸ್ಥಾನಕ್ಕೆ ರಾಜಿನಾಮೆ ಬಿಜೆಪಿ ಬಿಡುವ ಸುಳಿವು ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಸರಕಾರದಲ್ಲಿ ಸಚಿವರಾಗಿದ್ದ ಧಾರಾ ಸಿಂಗ್ ಚೌಹಾಣ್ ಬುಧವಾರ ರಾಜಿನಾಮೆ ನೀಡಿದ್ದಾರೆ. 24 ಗಂಟೆಯಲ್ಲಿ ಎರಡನೇ ಸಚಿವ ರಾಜಿನಾಮೆ ನೀಡಿದ್ದು, ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ದೊಡ್ಡ ಶಾಕ್ ನೀಡಿದಂತಾಗಿದೆ.
ಜ.11ರಂದು ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ಸಮಾಜವಾದಿ ಪಾರ್ಟಿ ಸೇರುವ ಸುಳಿವು ನೀಡಿದ್ದರು. ಇದಕ್ಕೂ ಮುನ್ನ ಆರು ಮಂದಿ ಬಿಜೆಪಿ ಶಾಸಕರು ಕೂಡ ರಾಜಿನಾಮೆ ನೀಡಿದ್ದಾರೆ. ಧಾರಾಸಿಂಗ್, ಯೋಗಿ ಸರಕಾರದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾಗಿದ್ದು, ಆಡಳಿತದಲ್ಲಿ ಹಿಂದುಳಿದ ವರ್ಗವನ್ನು ಕಡೆಗಣಿಸಲಾಗಿದೆ ಎಂದು ಹೇಳಿ ರಾಜಿನಾಮೆ ನೀಡಿದ್ದಾರೆ.
ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಈ ಬಾರಿಯೂ ಗೆಲ್ಲುವುದಕ್ಕೆ ಕಸರತ್ತು ನಡೆಸುತ್ತಿರುವಾಗಲೇ ಸಚಿವರಿಬ್ಬರು ರಾಜಿನಾಮೆ ನೀಡಿದ್ದು ದೊಡ್ಡ ಹಿನ್ನಡೆಯಾಗಿದೆ. ಮಂಗಳವಾರ ಕಾರ್ಮಿಕ ಸಚಿವರ ರಾಜಿನಾಮೆ ಬೆನ್ನಲ್ಲೇ ರೋಶನ್ ಲಾಲ್ ವರ್ಮಾ, ಬ್ರಜೇಶ್ ಪ್ರಜಾಪತಿ, ಭಗ್ವತಿ ಸಾಗರ್ ಮತ್ತು ವಿನಯ ಶಾಕ್ಯ ಎಂಬ ನಾಲ್ಕು ಬಿಜೆಪಿ ಶಾಸಕರು ರಾಜಿನಾಮೆ ನೀಡಿದ್ದರು. ಇಬ್ಬರು ಶಾಸಕರು ಈ ಹಿಂದೆಯೇ ರಾಜಿನಾಮೆ ನೀಡಿ ಎಸ್ಪಿ ಸೇರಿದ್ದರು.
ಹಿಂದುಳಿದ ವರ್ಗದ ನಾಯಕರಾಗಿರುವ ಸ್ವಾಮಿ ಪ್ರಸಾದ್ ಮೌರ್ಯ, ಉತ್ತರ ಪ್ರದೇಶದಲ್ಲಿ ಯೋಗಿ ಆಡಳಿತ ಶೈಲಿಗೆ ವಿರೋಧ ಹೊಂದಿದ್ದು, ಅದೇ ಕಾರಣಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ ಗೋರಖ್ ಪುರ ಮತ್ತು ಅಯೋಧ್ಯೆಯಲ್ಲಿ ಎರಡು ಕಡೆ ಸ್ಪರ್ಧೆ ನಡೆಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಶಾಸಕ ನರೇಶ್ ಸೈನಿ ಮತ್ತು ಸಮಾಜವಾದಿ ಪಾರ್ಟಿ ಶಾಸಕ ಹರಿ ಓಂ ಯಾದವ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಒಟ್ಟಿನಲ್ಲಿ ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ.
Uttar Pradesh minister Dara Singh Chauhan resigned from the cabinet on Wednesday. He is the second Uttar Pradesh minister to quit the post ahead of the assembly polls. A total of six MLAs have now resigned in the state.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm