ಬ್ರೇಕಿಂಗ್ ನ್ಯೂಸ್
13-01-22 09:05 pm HK Desk news ದೇಶ - ವಿದೇಶ
ಕೊಲ್ಕತ್ತಾ, ಜ.13 : ಪಶ್ಚಿಮ ಬಂಗಾಳದ ಜಲಪಾಯಿ ಗುರಿ ಜಿಲ್ಲೆಯಲ್ಲಿ ಬಿಕಾನೇರ್ – ಗುವಾಹಟಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, 12 ಬೋಗಿಗಳು ಉರುಳಿ ಬಿದ್ದು ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದಾರೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಿಂದ ಹೊರಟಿದ್ದ ರೈಲು ಬಿಹಾರದ ಪಾಟ್ನಾ ಮೂಲಕ ಅಸ್ಸಾಮ್ ರಾಜಧಾನಿ ಗುವಾಹಟಿಗೆ ತೆರಳುತ್ತಿತ್ತು. ಪಶ್ಚಿಮ ಬಂಗಾಳ ರಾಜ್ಯದ ಜಲಪಾಯಿ ಗುರಿ ಜಿಲ್ಲೆಯ ಮೈನಾಗುರಿ ಎಂಬಲ್ಲಿಂದ ಸಾಗುತ್ತಿದ್ದಾಗ ಗುರುವಾರ ಸಂಜೆ 5.15 ಗಂಟೆಗೆ ರೈಲು ಹಳಿ ತಪ್ಪಿದ್ದು, ಒಂದರ ಮೇಲೊಂದು ಬಿದ್ದಿದೆ.
ರೈಲಿನಲ್ಲಿ ಸುಮಾರು 1200 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಬಿಕಾನೇರ್ ನಿಂದ 177 ಮಂದಿ ಪ್ರಯಾಣಿಸುತ್ತಿದ್ದರೆ ಪಾಟ್ನಾ ಜಂಕ್ಷನ್ನಿಂದ 98 ಮಂದಿ ರೈಲು ಹತ್ತಿದ್ದರು. ಹಲವಾರು ಮಂದಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಅವರನ್ನು ಜಲಪಾಯಿಗುರಿ ಆಸ್ಪತ್ರೆಗೆ ಒಯ್ಯಲಾಗಿದೆ. ಸಿಲಿಗುರಿಯ ಎನ್ ಡಿಆರ್ ಎಫ್ ತಂಡ ಸ್ಥಳಕ್ಕಾಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಘಟನೆ ಬಗ್ಗೆ ನಿಗಾ ವಹಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಣೆ ಮಾಡಿದೆ.
As many as 12 bogies of the Bikaner-Guwahati Express have derailed in West Bengal's Jalpaiguri district. Five people have lost their lives in the accident. Rescue operations are underway.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm