ಬ್ರೇಕಿಂಗ್ ನ್ಯೂಸ್
13-01-22 09:05 pm HK Desk news ದೇಶ - ವಿದೇಶ
ಕೊಲ್ಕತ್ತಾ, ಜ.13 : ಪಶ್ಚಿಮ ಬಂಗಾಳದ ಜಲಪಾಯಿ ಗುರಿ ಜಿಲ್ಲೆಯಲ್ಲಿ ಬಿಕಾನೇರ್ – ಗುವಾಹಟಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, 12 ಬೋಗಿಗಳು ಉರುಳಿ ಬಿದ್ದು ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದಾರೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಿಂದ ಹೊರಟಿದ್ದ ರೈಲು ಬಿಹಾರದ ಪಾಟ್ನಾ ಮೂಲಕ ಅಸ್ಸಾಮ್ ರಾಜಧಾನಿ ಗುವಾಹಟಿಗೆ ತೆರಳುತ್ತಿತ್ತು. ಪಶ್ಚಿಮ ಬಂಗಾಳ ರಾಜ್ಯದ ಜಲಪಾಯಿ ಗುರಿ ಜಿಲ್ಲೆಯ ಮೈನಾಗುರಿ ಎಂಬಲ್ಲಿಂದ ಸಾಗುತ್ತಿದ್ದಾಗ ಗುರುವಾರ ಸಂಜೆ 5.15 ಗಂಟೆಗೆ ರೈಲು ಹಳಿ ತಪ್ಪಿದ್ದು, ಒಂದರ ಮೇಲೊಂದು ಬಿದ್ದಿದೆ.
ರೈಲಿನಲ್ಲಿ ಸುಮಾರು 1200 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಬಿಕಾನೇರ್ ನಿಂದ 177 ಮಂದಿ ಪ್ರಯಾಣಿಸುತ್ತಿದ್ದರೆ ಪಾಟ್ನಾ ಜಂಕ್ಷನ್ನಿಂದ 98 ಮಂದಿ ರೈಲು ಹತ್ತಿದ್ದರು. ಹಲವಾರು ಮಂದಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಅವರನ್ನು ಜಲಪಾಯಿಗುರಿ ಆಸ್ಪತ್ರೆಗೆ ಒಯ್ಯಲಾಗಿದೆ. ಸಿಲಿಗುರಿಯ ಎನ್ ಡಿಆರ್ ಎಫ್ ತಂಡ ಸ್ಥಳಕ್ಕಾಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಘಟನೆ ಬಗ್ಗೆ ನಿಗಾ ವಹಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಣೆ ಮಾಡಿದೆ.
As many as 12 bogies of the Bikaner-Guwahati Express have derailed in West Bengal's Jalpaiguri district. Five people have lost their lives in the accident. Rescue operations are underway.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am