ಬ್ರೇಕಿಂಗ್ ನ್ಯೂಸ್
13-01-22 09:05 pm HK Desk news ದೇಶ - ವಿದೇಶ
ಕೊಲ್ಕತ್ತಾ, ಜ.13 : ಪಶ್ಚಿಮ ಬಂಗಾಳದ ಜಲಪಾಯಿ ಗುರಿ ಜಿಲ್ಲೆಯಲ್ಲಿ ಬಿಕಾನೇರ್ – ಗುವಾಹಟಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, 12 ಬೋಗಿಗಳು ಉರುಳಿ ಬಿದ್ದು ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದಾರೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಿಂದ ಹೊರಟಿದ್ದ ರೈಲು ಬಿಹಾರದ ಪಾಟ್ನಾ ಮೂಲಕ ಅಸ್ಸಾಮ್ ರಾಜಧಾನಿ ಗುವಾಹಟಿಗೆ ತೆರಳುತ್ತಿತ್ತು. ಪಶ್ಚಿಮ ಬಂಗಾಳ ರಾಜ್ಯದ ಜಲಪಾಯಿ ಗುರಿ ಜಿಲ್ಲೆಯ ಮೈನಾಗುರಿ ಎಂಬಲ್ಲಿಂದ ಸಾಗುತ್ತಿದ್ದಾಗ ಗುರುವಾರ ಸಂಜೆ 5.15 ಗಂಟೆಗೆ ರೈಲು ಹಳಿ ತಪ್ಪಿದ್ದು, ಒಂದರ ಮೇಲೊಂದು ಬಿದ್ದಿದೆ.
ರೈಲಿನಲ್ಲಿ ಸುಮಾರು 1200 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಬಿಕಾನೇರ್ ನಿಂದ 177 ಮಂದಿ ಪ್ರಯಾಣಿಸುತ್ತಿದ್ದರೆ ಪಾಟ್ನಾ ಜಂಕ್ಷನ್ನಿಂದ 98 ಮಂದಿ ರೈಲು ಹತ್ತಿದ್ದರು. ಹಲವಾರು ಮಂದಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಅವರನ್ನು ಜಲಪಾಯಿಗುರಿ ಆಸ್ಪತ್ರೆಗೆ ಒಯ್ಯಲಾಗಿದೆ. ಸಿಲಿಗುರಿಯ ಎನ್ ಡಿಆರ್ ಎಫ್ ತಂಡ ಸ್ಥಳಕ್ಕಾಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಘಟನೆ ಬಗ್ಗೆ ನಿಗಾ ವಹಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಣೆ ಮಾಡಿದೆ.
As many as 12 bogies of the Bikaner-Guwahati Express have derailed in West Bengal's Jalpaiguri district. Five people have lost their lives in the accident. Rescue operations are underway.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm